ಬಹರೈನ್: ಬಹರೈನ್ ನಲ್ಲಿ ನಿರ್ಮಾಣಗೊಳ್ಳಲಿರುವ ಬೃಹತ್ ಸ್ವಾಮಿ ನಾರಾಯಣ ಮಂದಿರಕ್ಕೆ ಭಾವಿ ಪರ್ಯಾಯ ಮಠಾಧೀಶರಾದ ಪುತ್ತಿಗೆ ಸುಗುಣೇಂದ್ರತೀರ್ಥ ಶ್ರೀಪಾದರು ಭೂಮಿಪೂಜೆ ನೆರವೇರಿಸಿದರು.
ಅಲ್ಲಿನ ಭಕ್ತರ ಅಪೇಕ್ಷೆಯಂತೆ ಬೃಹತ್ ಸ್ವಾಮಿ ನಾರಾಯಣ ಮಂದಿರ ನಿರ್ಮಾಣ ಆಗುತ್ತಿದೆ. ಪುತ್ತಿಗೆ ಶ್ರೀಗಳು ಭೂಮಿಪೂಜೆ ನೆರವೇರಿಸಿ ಶುಭಹಾರೈಸಿದರು.
ವಿಶ್ವ ಪರ್ಯಾಯ ಸಂಚಾರದಲ್ಲಿರುವ ಪುತ್ತಿಗೆ ಶ್ರೀಪಾದರು ಬಹರೈನ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಅಲ್ಲಿನ ಭಕ್ತರಿಗೆ ಕೋಟಿ ಗೀತಾ ಲೇಖನ ಯಜ್ಞದ ದೀಕ್ಷೆ ನೀಡಿದರು.