ಗುರುಪುರ ಫಲ್ಗುಣಿ ನದಿ ತಟದಲ್ಲಿ ಶ್ರೀ ಮಹಾಕಾಲೇಶ್ವರ ಭವ್ಯ ಮೂರ್ತಿ ಕೆತ್ತನೆ ಕಾರ್ಯ ಆರಂಭ

ಮುಂಬಯಿ: ಗುರುಪುರ ಗೋಳಿದಡಿ ಗುತ್ತಿಗೆ ಹತ್ತಿರದ ಫಲ್ಗುಣಿ ನದಿ ತಟದಲ್ಲಿ ನಿರ್ಮಾಣಗೊಳ್ಳಲಿರುವ ದಕ್ಷಿಣ ಭಾರತದಲ್ಲೇ ಪ್ರಪ್ರಥಮವೆನ್ನಲಾದ ಶ್ರೀ ಗುರು ಮಹಾಕಾಲೇಶ್ವರ ದೇವರ ಏಕಶಿಲಾ ಮೂರ್ತಿಯ ಕೆತ್ತನೆ ಕಾರ್ಯಕ್ಕೆ ಭಾನುವಾರ(ಫೆ. 26) ಚಾಲನೆ ನೀಡಲಾಯಿತು.

ಗೋಳಿದಡಿ ಗುತ್ತಿನ ಗಡಿಕಾರ ವರ್ಧಮಾನ ದುರ್ಗಾಪ್ರಸಾದ ಶೆಟ್ಟಿ, ಪತ್ನಿ ಉಷಾ ಹಾಗೂ ಮಕ್ಕಳ ಸಮಕ್ಷಮದಲ್ಲಿ, ಪಾವಂಜೆಯ ಶ್ರೀ ನಿರಂಜನ್ ಭಟ್ ಮತ್ತು ಅಮೆರೇಶ್ ಭಟ್ ಅವರ ಪೌರೋಹಿತ್ಯದಲ್ಲಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದ ಬಳಿಕ ಬೆಳ್ತಂಗಡಿಯ ಶಿಲ್ಪಿ ವೆಂಕಟೇಶ್ ಆಚಾರ್ಯ ಅವರಿಗೆ ಕಾಲಭೈರವನ ಏಕಶಿಲಾಮೂರ್ತಿ ಕೆತ್ತನೆ ಕೆಲಸ ವಹಿಸಿಕೊಡಲಾಯಿತು.

ಈ ಸಂದರ್ಭದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ(ಎಸಿ) ಗುರುಪ್ರಸಾದ್, ಗುತ್ತು ಮನೆತನದ ಯಜಮಾನರು, ಗಡಿಕಾರರು, ಗಣ್ಯರು, ಸ್ಥಳೀಯರು ಉಪಸ್ಥಿತರಿದ್ದರು.

ಮೂರ್ತಿ ವಿಶೇಷ : ತಳಪಾಯದಿಂದ 5 ಹಂತದಲ್ಲಿ ಒಟ್ಟು 20 ಅಡಿ ಎತ್ತರದಲ್ಲಿ ಶಿಲಾಪೀಠ ನಿರ್ಮಾಣಗೊಳ್ಳಲಿದ್ದು, ಈ ಪೀಠದ ಮೇಲೆ 22 ಅಡಿ ಎತ್ತರದ ಆರು ಕೈಗಳ ಮಹಾಕಾಲೇಶ್ವರನ ಭವ್ಯ ಏಕಶಿಲಾ ಮೂರ್ತಿ ಸ್ಥಾಪನೆಯಾಗಲಿದೆ. ಬಯಲು ಆಲಯದಲ್ಲಿ ತಲೆಎತ್ತಲಿರುವ ಮಹಾಕಾಲೇಶ್ವರ ಮೂರ್ತಿಯು ಒಟ್ಟು 42 ಎತ್ತರದಲ್ಲಿ ರಾರಾಜಿಸಲಿದೆ. ಈ ಸಾನಿಧ್ಯದ ಪಕ್ಕದಲ್ಲಿ ನೂತನ ಸೇತುವೆಯೊಂದಿಗೆ ಮಂಗಳೂರು-ಮೂಡಬಿದ್ರೆ ಹೆದ್ದಾರಿ(169) ವಿಸ್ತರಣೆಯಾಗುತ್ತಿರುವುದು ಸಾನಿಧ್ಯಕ್ಕೆ ಮತ್ತಷ್ಟು ಆಕರ್ಷಣೆಯಾಗಲಿದೆ.

Sneha Gowda

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

4 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

4 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

4 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

5 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

5 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

5 hours ago