Categories: ಯುಎಇ

ಏ.23 ರಂದು ಕೆಐಸಿ ಯುಎಇ ವತಿಯಿಂದ ದುಬೈಯಲ್ಲಿ ಬೃಹತ್ ಇಫ್ತಾರ್ ಸಂಗಮ

ದುಬೈ : ಕರ್ನಾಟಕ ಇಸ್ಲಾಮಿಕ್ ಸೆಂಟರ್ (ಕೆ.ಐ.ಸಿ) ಯು.ಎ.ಇ ಇದರ ವತಿಯಿಂದ ವರ್ಷಂಪ್ರತಿ ಹಮ್ಮಿಕೊಂಡು ಬರುತ್ತಿರುವ ಇಫ್ತಾರ್ ಕೂಟ ಕಾರ್ಯಕ್ರಮವು ಇದೇ ಬರುವ ಏ.23 ಶನಿವಾರ ದಂದು ಆಪಲ್ ಇಂಟರ್‌ನ್ಯಾಷನಲ್ ಸ್ಕೂಲ್ ಅಲ್ ಕುಸೈಸ್ ನಲ್ಲಿ ನಡೆಯಲಿದೆ.

ಈ ಸಂಬಂಧ ಸಂಜೆ ಅಸರ್ ನಮಾಝಿನ ಬಳಿಕ ಪ್ರಾರಂಭ ಗೊಳ್ಳಲಿರುವ ಆಧ್ಯಾತ್ಮಿಕ ಅಹ್ಮಾಉಲ್ ಹುಸ್ನಾ ಮಜ್ಲಿಸ್ ಕಾರ್ಯಕ್ರಮದಲ್ಲಿ ಹಲವಾರು ಉಲಮಾ-ಉಮರಾನೇತಾರರು , ವಿವಿಧ ಸಂಘ ಸಂಸ್ಥೆಗಳ ನಾಯಕರು , ಸಾಮಾಜಿಕ ಧಾರ್ಮಿಕ ಮುಖಂಡರು, ಅನಿವಾಸಿ ಉದ್ಯಮಿಗಳು ಕೆಐಸಿ ಹಿತೈಷಿಗಳು ಹಾಗೂ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಅಕಾಡೆಮಿ ಪದಾಧಿಕಾರಿಗಳು ಭಾಗವಹಿಸಲಿದ್ದು, ಅನಿವಾಸಿ ದೀನೀ ಸ್ನೇಹಿಗಳು ಈ ಕಾರ್ಯಕ್ರಮದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಇಫ್ತಾರ್ ವ್ಯವಸ್ಥೆ ಮಾಡಲಾಗುವುದು ಎಂದು ಇಫ್ತಾರ್ ಕೂಟ ಸ್ವಾಗತ ಸಮಿತಿ ಅಧ್ಯಕ್ಷರಾದ ಅಶ್ರಫ್ ಷಾ ಮಾಂತೂರ್ , ಕಾರ್ಯದರ್ಶಿ ಅಸೀಫ್ ಮರೀಲ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

( ಮೆಟ್ರೋ ನಿಲ್ದಾಣ: ಅಲ್ ನಹ್-ದಾ ಮೆಟ್ರೋ ನಿಲ್ದಾಣ, ಎಮರೇಟ್ಸ್ ಡ್ರೈವಿಂಗ್ ಸ್ಕೂಲ್ ಹಿಂಬಾಗ, ಅಲ್ ಕುಸೈಸ್. )

Gayathri SG

Recent Posts

ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಸಾವು

ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…

16 mins ago

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

31 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

52 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

1 hour ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

2 hours ago