ದುಬೈ : ಕರ್ನಾಟಕ ಇಸ್ಲಾಮಿಕ್ ಸೆಂಟರ್ (ಕೆ.ಐ.ಸಿ) ಯು.ಎ.ಇ ಇದರ ವತಿಯಿಂದ ವರ್ಷಂಪ್ರತಿ ಹಮ್ಮಿಕೊಂಡು ಬರುತ್ತಿರುವ ಇಫ್ತಾರ್ ಕೂಟ ಕಾರ್ಯಕ್ರಮವು ಇದೇ ಬರುವ ಏ.23 ಶನಿವಾರ ದಂದು ಆಪಲ್ ಇಂಟರ್ನ್ಯಾಷನಲ್ ಸ್ಕೂಲ್ ಅಲ್ ಕುಸೈಸ್ ನಲ್ಲಿ ನಡೆಯಲಿದೆ.
ಈ ಸಂಬಂಧ ಸಂಜೆ ಅಸರ್ ನಮಾಝಿನ ಬಳಿಕ ಪ್ರಾರಂಭ ಗೊಳ್ಳಲಿರುವ ಆಧ್ಯಾತ್ಮಿಕ ಅಹ್ಮಾಉಲ್ ಹುಸ್ನಾ ಮಜ್ಲಿಸ್ ಕಾರ್ಯಕ್ರಮದಲ್ಲಿ ಹಲವಾರು ಉಲಮಾ-ಉಮರಾನೇತಾರರು , ವಿವಿಧ ಸಂಘ ಸಂಸ್ಥೆಗಳ ನಾಯಕರು , ಸಾಮಾಜಿಕ ಧಾರ್ಮಿಕ ಮುಖಂಡರು, ಅನಿವಾಸಿ ಉದ್ಯಮಿಗಳು ಕೆಐಸಿ ಹಿತೈಷಿಗಳು ಹಾಗೂ ಕರ್ನಾಟಕ ಇಸ್ಲಾಮಿಕ್ ಸೆಂಟರ್ ಅಕಾಡೆಮಿ ಪದಾಧಿಕಾರಿಗಳು ಭಾಗವಹಿಸಲಿದ್ದು, ಅನಿವಾಸಿ ದೀನೀ ಸ್ನೇಹಿಗಳು ಈ ಕಾರ್ಯಕ್ರಮದಲ್ಲಿ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಇಫ್ತಾರ್ ವ್ಯವಸ್ಥೆ ಮಾಡಲಾಗುವುದು ಎಂದು ಇಫ್ತಾರ್ ಕೂಟ ಸ್ವಾಗತ ಸಮಿತಿ ಅಧ್ಯಕ್ಷರಾದ ಅಶ್ರಫ್ ಷಾ ಮಾಂತೂರ್ , ಕಾರ್ಯದರ್ಶಿ ಅಸೀಫ್ ಮರೀಲ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
( ಮೆಟ್ರೋ ನಿಲ್ದಾಣ: ಅಲ್ ನಹ್-ದಾ ಮೆಟ್ರೋ ನಿಲ್ದಾಣ, ಎಮರೇಟ್ಸ್ ಡ್ರೈವಿಂಗ್ ಸ್ಕೂಲ್ ಹಿಂಬಾಗ, ಅಲ್ ಕುಸೈಸ್. )
ಕೆರೆಯ ಬಳಿ ಆಸ್ವಸ್ಥಗೊಂಡು ಬಿದ್ದಿದ್ದ ಆನೆ ಚಿಕಿತ್ಸೆಗೆ ಸ್ಪಂದಿಸದೇ ಅಸುನೀಗಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ, ಹೆಡಿಯಾಲ ಉಪ-ವಿಭಾಗ…
ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರದ…
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…