Categories: ಯುಎಇ

ದುಬೈ ಯಕ್ಷೋತ್ಸವ 2022: ಲಲಿತೋಪಖ್ಯಾನ – ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ

ದುಬೈ: ದುಬೈ ಯಕ್ಷಗಾನ ಅಭ್ಯಾಸ ತರಗತಿ(DYAT) ಪ್ರಾಯೋಜಿತ ಜೂ. 11, ಶನಿವಾರದಂದು ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ.

ಅಭ್ಯಾಗತರಾಗಿ ರಂಗದ ರಂಗೇರಿಸಲಿರುವ ಪ್ರಸಿದ್ಧ ಯುವ ಮಹಿಳಾ ಭಾಗವತರಾದ  ಅಮೃತ ಅಡಿಗ, ಮದ್ದಳೆಗಾರರಾದ  ಕೌಶಿಕ್ ರಾವ್ ಪುತ್ತಿಗೆ,  ಸವಿನಯ ನೆಲ್ಲಿತೀರ್ಥ, ಪ್ರಮುಖ ಸ್ತ್ರೀಪಾತ್ರದಲ್ಲಿ ರಂಜಿಸಲಿರುವ  ದೀಪಕ್ ರಾವ್ ಪೇಜಾವರ, ವಸ್ತ್ರಾಲಂಕಾರದ  ಗಂಗಾಧರ ಡಿ. ಶೆಟ್ಟಿಗಾರ್ ಕಿನ್ನಿಗೋಳಿ, ವರ್ಣಾಲಂಕಾರದ  ನಿತಿನ್ ಕುಂಪಲ ಮೊದಲಾದವರು ಈಗಾಗಲೇ ಯಕ್ಷಗಾನ ಅಭ್ಯಾಸ ತರಗತಿ ದುಬೈ ತಂಡವನ್ನು ಸೇರಿಕೊಂಡು ಪೂರ್ವ ತಯಾರಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಯಕ್ಷರಂಗದ ಮಿನುಗುತಾರೆ, ಸ್ವರಸಾಮ್ರಾಟರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರು ಈ ವಾರ ನಮ್ಮನ್ನು ಸೇರಿಕೊಂಡು ಅಂತಿಮ ಹಂತದ ರೂಪುರೇಷೆ ನೀಡಲಿದ್ದಾರೆ.

ಅಭ್ಯಾಗತರನ್ನು ಸೇರಿ ದುಬೈಯಲ್ಲಿ ದಾಖಲೆಯ 49 ಮಂದಿ ಕಲಾವಿದರು ಸಂಚಾಲಕರಾದ ಕೊಟ್ಟಿಂಜ ದಿನೇಶ ಶೆಟ್ಟರ ನೇತೃತ್ವದಲ್ಲಿ ಸಂಯೋಜನೆಗೊಂಡು ಪ್ರದರ್ಶನಕ್ಕೆ ಸಿದ್ಧರಾಗಿದ್ದಾರೆ. ತಂಡದ ಗುರುಗಳಾದ ಯಕ್ಷಮಯೂರ  ಶೇಖರ್ ಡಿ. ಶೆಟ್ಟಿಗಾರರ ನಿರ್ದೇಶನದಲ್ಲಿ, ನಾಟ್ಯಗುರು  ಶರತ್ ಕುಡ್ಲರ ಮಾರ್ಗದರ್ಶನದಲ್ಲಿ ಸಿದ್ಧಗೊಂಡ ಸರ್ವ ಕಲಾವಿದರು ಸರಿಸುಮಾರು 72 ಪಾತ್ರಗಳನ್ನು ಕಲಾಭಿಮಾನಿಗಳ ಮುಂದೆ ಪ್ರದರ್ಶಿಸಲಿದ್ದಾರೆ.

ಬಹುಸಂಖ್ಯೆಯ ಸ್ವಯಂಸೇವಕರ ತಂಡ ರಂಗಸ್ಥಳ, ವೇಷಭೂಷಣ, ಆಸನ ವ್ಯವಸ್ಥೆ, ಅಲಂಕಾರ ಮುಂತಾದ ಸಿದ್ಧತೆ ಸಡಗರಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ದುಬೈ ಯಕ್ಷಗಾನ ಅಭ್ಯಾಸ ತರಗತಿ ಪ್ರಾಯೋಜಿತ ಚೊಚ್ಚಲ ಯಕ್ಷರಕ್ಷಾ ವಿಶೇಷ ವಾರ್ಷಿಕ ಪ್ರಶಸ್ತಿಯನ್ನು ಯಕ್ಷಗಾನ ಕಲಾವಿದ, ಸಂಘಟಕ  ಪ್ರಭಾಕರ ಡಿ. ಸುವರ್ಣ ರಿಗೆ ಗಣ್ಯರ ಸಮಕ್ಷ ಪ್ರದಾನ ಮಾಡಲಾಗುವುದು.

ಜೂ. 11ರ, ಇಳಿಸಂಜೆ 4.00 ಗಂಟೆಗೆ ಸರಿಯಾಗಿ ಚೌಕಿಪೂಜೆ,  4.30ಕ್ಕೆ ಪೂರ್ವರಂಗ ಚೆಂಡೆ ಜುಗಲ್ಬಂದಿ, 5ಕ್ಕೆ ಸರಿಯಾಗಿ ಕಥಾರಂಭವಾಗಲಿದೆ. ಮಾತ್ರವಲ್ಲದೆ ರಾತ್ರಿ 9 ಗಂಟೆಗೆ ಸರಿಯಾಗಿ ಮಹಾದಾನಿಗಳ ನೆರವಿನಿಂದ ಸಾರ್ವಜನಿಕ ಅನ್ನ ಸಂತರ್ಪಣೆ ಜರಗಲಿದೆ.

ಯು.ಎ.ಇಯ ಸಮಸ್ತ ಕಲಾಭಿಮಾನಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು, ಕಲೆ- ಕಲಾವಿದರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪ್ರೋತ್ಸಾಹಿಸಿ ಭಗವದನುಗ್ರಹಕ್ಕೆ ಪಾತ್ರರಾಗಬೇಕೆಂದು, ದುಬೈ ಯಕ್ಷಗಾನ ಅಭ್ಯಾಸ ತರಗತಿಯ ಮುದ್ರಣ- ಮಾಧ್ಯಮ- ಪ್ರಸಾರಗಳ ನೇತೃತ್ವ ವಹಿಸಿರುವ ಗಿರೀಶ್ ನಾರಾಯಣ್ ಕಾಟಿಪಳ್ಳ ಅವರು ತಮ್ಮ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

28 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

54 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago