ದುಬೈ: ವಿಶ್ವ ಕನ್ನಡ ಹಬ್ಬದಲ್ಲಿ ಸಾಮಾಜಿಕ ಕ್ಷೇತ್ರಕ್ಕಾಗಿ ಸರ್ವೋತ್ತಮ ಶೆಟ್ಟಿ ಅವರಿಗೆ ‘ವಿಶ್ವಮಾನ್ಯ ಪ್ರಶಸ್ತಿ’ಯನ್ನು ಶನಿವಾರ ದುಬೈನ ಶೇಖ್ ರಶೀದ್ ಸಭಾಂಗಣದಲ್ಲಿ ನ.19 ರಂದು ಪ್ರದಾನ ಮಾಡಲಾಯಿತು. ಈ ಕಾರ್ಯಕ್ರಮವನ್ನು ಕನ್ನಡಿಗರು ದುಬೈ ಸಹಯೋಗದಲ್ಲಿ ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಅಬುದಾಬಿ ಕರ್ನಾಟಕ ಸಂಘದ ಅಧ್ಯಕ್ಷ ಸರ್ವೋತ್ತಮ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭದಲ್ಲಿ ಕನ್ನಡ ತಾರೆಯರ ನೃತ್ಯ ಮತ್ತು ಗಾಯನ ಕಾರ್ಯಕ್ರಮಗಳು ನಡೆದವು.