ಉತ್ತರಾಖಂಡ: ಉತ್ತರಕಾಶಿಯ ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್‌ ಗೆ ತೆರಳಿದ್ದ ಕರ್ನಾಟಕದ 18 ಮಂದಿ ಸೇರಿ ಒಟ್ಟು  22 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.

ಕರ್ನಾಟಕದ 18 ಮಂದಿ, ಮಹಾರಾಷ್ಟ್ರದ ಒಬ್ಬರು ಮತ್ತು ಮೂವರು ಸ್ಥಳೀಯ ಮಾರ್ಗದರ್ಶಕರನ್ನು ಒಳಗೊಂಡ ಚಾರಣ ತಂಡವು ಮೇ 29 ರಂದು ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್ ಯಾತ್ರೆಗೆ ತೆರಳಿದ್ದು, ಜೂನ್ 7 ರಂದು ಹಿಂತಿರುಗಬೇಕು ಎಂದು ಉತ್ತರಕಾಶಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮೆಹರ್ಬನ್ ಸಿಂಗ್ ಬಿಶ್ತ್ ತಿಳಿಸಿದ್ದಾರೆ.

ಪ್ರತಿಕೂಲ ಹವಾಮಾನದಿಂದಾಗಿ ತಂಡವು ದಾರಿ ತಪ್ಪಿದೆ ಮತ್ತು ಟ್ರೆಕ್ಕಿಂಗ್ ಏಜೆನ್ಸಿ, ಹಿಮಾಲಯನ್ ವ್ಯೂ ಟ್ರ್ಯಾಕಿಂಗ್ ಏಜೆನ್ಸಿ, ನಾಲ್ವರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ನೀಡಿದರು ಮತ್ತು 13 ಮಂದಿಯನ್ನು ಸ್ಥಳಾಂತರಿಸುವಂತೆ ಮನವಿ ಮಾಡಿದ್ದರು.

ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲು ಮತ್ತು ಚಾರಣಿಗರನ್ನು ರಕ್ಷಿಸಲು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಗೆ ಬಿಶ್ತ್ ವಿನಂತಿಸಿದರು. ಸ್ಥಳೀಯ ಮಟ್ಟದ ರಕ್ಷಣಾ ತಂಡಗಳನ್ನು ಸ್ಥಳಕ್ಕೆ ಕಳುಹಿಸುವಂತೆಯೂ ಅವರು ಆದೇಶಿಸಿದರು. ಸಹಸ್ತ್ರ ತಾಲ್ ಸುಮಾರು 4,100-4,400 ಮೀಟರ್ ಎತ್ತರದಲ್ಲಿದೆ ಮತ್ತು ಘಟನೆಯ ಸ್ಥಳವು ಉತ್ತರಕಾಶಿ ಮತ್ತು ತೆಹ್ರಿ ಜಿಲ್ಲೆಗಳ ಗಡಿ ಪ್ರದೇಶದಲ್ಲಿದೆ ಎಂದು ಅವರು ಹೇಳಿದರು.

ಸಹಸ್ತ್ರ ತಾಲ್ ಒಂದು ಶಿಖರದ ಮೇಲೆ ಏಳು ಸರೋವರಗಳ ಸಮೂಹವಾಗಿದೆ ಮತ್ತು ಪಾಂಡವರು ಈ ಸ್ಥಳದಿಂದ ಸ್ವರ್ಗಕ್ಕೆ ತೆರಳಿದ್ದರು ಎಂದು ನಂಬಲಾಗಿದೆ.