ದೆಹಲಿ: ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ಬುಧವಾರ ಹಳಿಗಳ ಮೇಲೆ ಇರಿಸಲಾಗಿದ್ದ ಸಿಮೆಂಟ್ ಸ್ಲ್ಯಾಬ್‌ಗಳಿಗೆ ಗೂಡ್ಸ್ ರೈಲೊಂದು ಡಿಕ್ಕಿ ಹೊಡೆದಿದ್ದು, ಭಾರೀ ಅನಾಹುತ ತಪ್ಪಿದೆ.

ರಾಯ್‌ಬರೇಲಿ ಲಕ್ಷ್ಮಣಪುರದಲ್ಲಿ ಈ ಘಟನೆ ಸಂಭವಿಸಿದ್ದು, ಸಮೀಪದ ಹೊಲದಲ್ಲಿ ಇರಿಸಲಾಗಿದ್ದ ಮೂರು ಸಿಮೆಂಟ್ ಸ್ಲ್ಯಾಬ್‌ಗಳನ್ನು ಟ್ರ‍್ಯಾಕ್ ಮೇಲೆ ತಂದಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಡಿಕ್ಕಿಯ ನಂತರ ಯಾವುದೇ ದೊಡ್ಡ ಅಪಘಾತ ಸಂಭವಿಸಿಲ್ಲ. ಆರ್‌ಪಿಎಫ್ ಉಂಚಹರ್ ತಂಡ ಈ ಬಗ್ಗೆ ತನಿಖೆ ನಡೆಸುತ್ತಿದೆ.