ಮುಂಬೈ: ಪಹಲ್ಗಾಮ್‌ ದಾಳಿ ನಂತರ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ.

ಆರ್‌ಎಸ್‌ಎಸ್‌ ವಾರ್ಷಿಕ ವಿಜಯದಶಮಿ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಭದ್ರತ್ರೆ ಬಂದಾಗ ಭಾರತವು ಹೆಚ್ಚು ಜಾಗರೂಕವಾಗಿರಬೇಕು ಎಂದು ಸಲಹೆ ನೀಡಿದ್ದಾರೆ. ನಾವು ಇತರ ದೇಶಗಳೊಂದಿಗೆ ಸ್ನೇಹಪರ ಸಂಬಂಧವನ್ನು ಕಾಪಾಡಿಕೊಂಡಿದ್ದರೂ, ನಾವು ಅದನ್ನು ಮುಂದುವರಿಸುತ್ತೇವೆ.

ನಮ್ಮ ಭದ್ರತೆಗೆ ಬಂದಾಗ, ನಾವು ಹೆಚ್ಚು ಜಾಗರೂಕರಾಗಿರಬೇಕು. ಪಹಲ್ಗಮ್ ದಾಳಿಯ ನಂತರ, ವಿವಿಧ ದೇಶಗಳು ತೆಗೆದುಕೊಂಡ ನಿರ್ಣಯಗಳಿಂದ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ ಎಂದು ತಿಳಿಸಿದ್ದಾರೆ.

ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ದೇಶಗಳಲ್ಲಿ ಸಾರ್ವಜನಿಕರು ದಂಗೆಯೆದ್ದು ಹಿಂಸಾತ್ಮಕ ಘಟನೆಗಳು ನಡೆದಿವೆ. ಭಾರತದಲ್ಲೂ ಇಂತಹ ಪರಿಸ್ಥಿತಿ ಸೃಷ್ಟಿಸಲು ಬಯಸುವವರು ದೇಶದ ಒಳಗೂ ಮತ್ತು ಹೊರಗೂ ಸಕ್ರಿಯರಾಗಿದ್ದಾರೆ. ಹಿಂಸಾತ್ಮಕ ದಂಗೆ ಅರಾಜಕತೆಗೆ ಮಾತ್ರ ಕಾರಣವಾಗುತ್ತವೆ. ವಿದೇಶಗಳ ಮಧ್ಯಪ್ರವೇಶಕ್ಕೆ ಅವಕಾಶ ನೀಡುತ್ತದೆ ಎಂದರು.