ಕೋಲ್ಕತ್ತಾ: ಬಂಗಾಳದಲ್ಲಿ ಗೆಲುವು ಸಾಧಿಸಿದ ನಂತರ ನಾನು ಎಲ್ಲಾ ರಾಜಕೀಯ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ದೆಹಲಿಯನ್ನು ಸ್ವಾಧೀನಪಡಿಸಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದರು.

ಕೋಲ್ಕತ್ತಾದ ಚೌರಿಂಗೀ ಪ್ರದೇಶದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅವರು, “ನನಗೆ ಅಧಿಕಾರ ಬೇಕಾಗಿಲ್ಲ; ದೆಹಲಿಯಲ್ಲಿ ಬಿಜೆಪಿಯ ಸಂಪೂರ್ಣ ವಿನಾಶವನ್ನು ನಾನು ಬಯಸುತ್ತೇನೆ. ಬಂಗಾಳದಲ್ಲಿ ಅವರ ನಾಶ ಅನಿವಾರ್ಯವಾಗಿದ್ದರೂ, ದೆಹಲಿಯಿಂದಲೂ ಬಿಜೆಪಿಯನ್ನು ಹೊರಹಾಕಬೇಕು. 15 ವರ್ಷಗಳಿಂದ ಅಧಿಕಾರದಲ್ಲಿದ್ದು, ವಿರೋಧ ಪಕ್ಷಗಳನ್ನು ಒಟ್ಟುಗೂಡಿಸುವ ಮೂಲಕ ಕೇಂದ್ರದಲ್ಲಿ ಬಿಜೆಪಿಯನ್ನು ಕಿತ್ತುಹಾಕುತ್ತೇವೆ” ಎಂದು ವಾಗ್ದಾಳಿ ನಡೆಸಿದರು.

“ಇದನ್ನು ನೆನಪಿಡಿ, ನೀವು ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ. ನಾವು ಅನ್ಯಾಯದ ವಿರುದ್ಧ ಹೋರಾಡುತ್ತೇವೆ; ನಾವು ನಮ್ಮ ಹಕ್ಕುಗಳಿಗಾಗಿ ಹೋರಾಡುತ್ತೇವೆ. ನಾನು ಬಂಗಾಳದಲ್ಲಿ ಹುಟ್ಟಿದ್ದೇನೆ ಮತ್ತು ನಾನು ಈ ಬಂಗಾಳದಲ್ಲಿಯೇ ಕೊನೆಯುಸಿರೆಳೆಯುತ್ತೇನೆ” ಎಂದರು.