ಹೊಸದಿಲ್ಲಿ: ಸಂತ್ರಸ್ಥೆ ಕಿಡ್ನಾಪ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಎಚ್‌ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣ ಅವರಿಗೆ ಮತ್ತೆ ಸಂಕಷ್ಟ ಶುರುವಾಗಿದೆ.ಭವಾನಿ ಅವರ ನಿರೀಕ್ಷಣಾ ಜಾಮೀನು ಕುರಿತ ಅರ್ಜಿ ಇಂದು ಸುಪ್ರೀಂ ಕೋರ್ಟ್‌ ಮುಂದೆ ವಿಚಾರಣೆಗೆ ಬರಲಿದೆ.

ಕಿಡ್ನಾಪ್‌ ಪ್ರಕರಣದಲ್ಲಿ ಭವಾನಿ ರೇವಣ್ಣ ಹೈಕೋರ್ಟ್‌ನಿಂದ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಪಡೆದಿದ್ದರು. ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ಕೋರಿ ಎಸ್‌ಐಟಿ ಸುಪ್ರೀಂ ಕೋರ್ಟ್‌ಗೆ ಬಂದಿದೆ. ಇಂದು ಸುಪ್ರೀಂ ಕೋರ್ಟ್‌ನಲ್ಲಿ ಈ ಅರ್ಜಿ ವಿಚಾರಣೆ ನಡೆಯಲಿದೆ.