ದೆಹಲಿ: ಕೋಲ್ಕತ್ತಾದಲ್ಲಿ ವೈದ್ಯೆಯೊಬ್ಬಳ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಸಿಎಂ ಸೂಚನೆ ಮೇರೆಗೆ ನಿರ್ಣಾಯಕ ಸಾಕ್ಷ್ಯಗಳನ್ನು ನಾಶಪಡಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಸೋಮವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಒತ್ತಾಯಿಸಿದೆ.
ಸಿಎಂ ಮಮತಾ ನಾಚಿಕೆ ಇಲ್ಲದವರು ಎಂದು ಟೀಕಿಸಿದ ಬಿಜೆಪಿ ಕಾಂಗ್ರೆಸ್ನ ರಾಹುಲ್ ಗಾಂಧಿ ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಟೀಕಿಸಿದ ಬಿಜೆಪಿ ಅವರನ್ನು “ರಾಜಕೀಯ ರಣಹದ್ದುಗಳು” ಎಂದು ಕರೆದಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳು ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ವರದಿಯಾಗಿರುವ ಇಂತಹ ಪ್ರಕರಣಗಳ ಬಗ್ಗೆ ಸಾಮಾನ್ಯ ಕಾಳಜಿಯನ್ನು ವ್ಯಕ್ತಪಡಿಸುವ ಮೂಲಕ ಟ್ರೈನಿ ವೈದ್ಯರ ಅತ್ಯಾಚಾರ ಮತ್ತು ಕೊಲೆಯನ್ನು ಅವರು “ಸಾಮಾನ್ಯಗೊಳಿಸಿದ್ದಾರೆ” ಎಂದು ಬಿಜೆಪಿ ದೂರಿದೆ.
ಆಕೆಯ ನಿರ್ಲಜ್ಜತನವನ್ನು ನೋಡಿ. ಅತ್ಯಾಚಾರ ಮತ್ತು ಕೊಲೆಯ ಭೀಕರ ಘಟನೆಯಿಂದ ಇಡೀ ದೇಶವೇ ತಲೆತಗ್ಗಿಸಿದ ಸಂದರ್ಭದಲ್ಲಿ ಅವರು ಕೋಲ್ಕತ್ತಾದಲ್ಲಿ ಮೆರವಣಿಗೆ ನಡೆಸಿದರು. ಅವರು ತಕ್ಷಣವೇ (ಮುಖ್ಯಮಂತ್ರಿ ಸ್ಥಾನಕ್ಕೆ) ರಾಜೀನಾಮೆ ನೀಡಬೇಕು”. “ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ, ಮಮತಾ ಬ್ಯಾನರ್ಜಿ ಅವರ ತಲೆಯಲ್ಲಿ ಸಂಪೂರ್ಣ ಅವ್ಯವಸ್ಥೆ ಇದೆ” ಎಂದು ಬಿಜೆಪಿ ನಾಯಕ ಹೇಳಿದ್ದಾರೆ