ಗಂಗಾನದಿಯಲ್ಲಿ 17 ಮಂದಿ ಪ್ರಯಾಣಿಸುತ್ತಿದ್ದ ದೋಣಿ ಮುಳುಗಡೆಯಾಗಿದ್ದು, 6 ಮಂದಿ ನಾಪತ್ತೆಯಾಗಿರುವ ಘಟನೆ ನಡೆದಿದೆ. ಪಾಟ್ನಾದಿಂದ 70 ಕಿಮೀ ದೂರದಲ್ಲಿರುವ ಬಾರ್ಹ್ ಪಟ್ಟಣದ ಬಳಿ ಗಂಗಾ ನದಿಯಲ್ಲಿ ಮುಳುಗಿದೆ. ಹನ್ನೊಂದು ಪ್ರಯಾಣಿಕರು ಈಜಿ ದಡ ತಲುಪಿದ್ದಾರೆ, ಉಳಿದ ಆರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆ ಸಂಭವಿಸಿದಾಗ ಬೋಟ್ ಬರ್ಹ್ನ ಉಮಾನಾಥ್ ಘಾಟ್ನಿಂದ ಡಿಯಾರಾಗೆ ಪ್ರಯಾಣಿಸುತ್ತಿದ್ದು, ಪ್ರಸ್ತುತ ಬೋಟ್ನಲ್ಲಿರುವ ಉಳಿದ ಆರು ಪ್ರಯಾಣಿಕರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೇ 19 ರಂದು ಬೆಳಿಗ್ಗೆ 7-8 ರ ಸುಮಾರಿಗೆ ಕೆಲವು ರೈತರು ತಮ್ಮ ತರಕಾರಿಗಳನ್ನು ದೋಣಿಯಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿತ್ತು.
Ad