ತಿರುವನಂತಪುರಂ: ಮುಂಬೈನಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಪೂರ್ಣ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ.
ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿಯಿತು ಮತ್ತು ಅದನ್ನು ಪ್ರತ್ಯೇಕ ವಿಭಾಗಕ್ಕೆ ಸ್ಥಳಾಂತರಿಸಲಾಯಿತು. ಪ್ರಯಾಣಿಕರನ್ನು ಶೀಘ್ರವಾಗಿ ವಿಮಾನದಿಂದ ಸ್ಥಳಾಂತರಿಸಲಾಯಿತು. ವಿಮಾನವು ತಿರುವನಂತಪುರಂ ವಿಮಾನ ನಿಲ್ದಾಣವನ್ನು ಸಮೀಪಿಸುತ್ತಿದ್ದಂತೆ ಪೈಲಟ್ನಿಂದ ಬಾಂಬ್ ಬೆದರಿಕೆ ಕರೆಯ ಬಗ್ಗೆ ಮಾಹಿತಿ ದೊರೆತಿದೆ.
ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಹೊರಟ ಬಳಿಕ ಬಾಂಬ್ ಬೆದರಿಕೆ ಗೊತ್ತಾಗಿತ್ತು. ಏರ್ ಇಂಡಿಯಾದ ಮುಂಬೈ-ತಿರುವನಂತಪುರಂ ವಿಮಾನ ನಂ. AI657ರಲ್ಲಿ ಈ ಘಟನೆ ನಡೆದಿದೆ. ಬಾಂಬ್ ಬೆದರಿಕೆಯ ಮೂಲದ ವಿವರಗಳನ್ನು ಮತ್ತು ಇತರ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

