Bengaluru 22°C
Ad

ಪ್ರಧಾನಿ ಮೋದಿ ಭೇಟಿಯಾದ ಸಿದ್ದರಾಮಯ್ಯ : ಹಲವು ಯೋಜನೆಗಳ ಪ್ರಸ್ತಾವನೆ ಸಲ್ಲಿಕೆ

ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಭೇಟಿಯಾಗಿದ್ದಾರೆ.

ದೆಹಲಿ:  ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ನಿವಾಸದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್​ ಭೇಟಿಯಾಗಿದ್ದಾರೆ.

Ad
300x250 2

ಭೇಟಿ ಬಳಿಕ ಮಾಧ್ಯಮದವರೊಂದಿಗೆ ಡಿಕೆ ಶಿವಕುಮಾರ್ ಮಾತನಾಡಿದ್ದು, ರಾಜ್ಯದ ವಿಚಾರಗಳ ಬಗ್ಗೆ ಪ್ರಧಾನಿ ಮೋದಿ ಜೊತೆ ಚರ್ಚಿಸಿದ್ದೇವೆ. ರಾಜ್ಯಕ್ಕೆ ಏನೇನ್ ಬಾಕಿ ಇದೆ ಅಂತೆಲ್ಲ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಎಲ್ಲಾ ವಿವರಣೆ ನೀಡಿದ್ದಾರೆ. ಭದ್ರಾ ಮೇಲ್ದಂಡೆ, ಮೇಕೆದಾಟು ಕುಡಿಯುವ ನೀರಿನ ಯೋಜನೆ, ಮಹದಾಯಿ, ಬೆಂಗಳೂರು ಅಭಿವೃದ್ಧಿ ಸಂಬಂಧ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಾವು ಹೆಚ್ಚು ತೆರಿಗೆ ನೀಡುತ್ತೇವೆ ಎಂದು ವಿವರಣೆ ನೀಡಿದ್ದೇವೆ. ಎಲ್ಲವನ್ನೂ ಪರಿಶೀಲನೆ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

Ad
Ad
Nk Channel Final 21 09 2023
Ad