Bengaluru 23°C
Ad

ಭದ್ರತಾ ಸಿಬ್ಬಂದಿಗಳ ಭರ್ಜರಿ ಕಾರ್ಯಚರಣೆ : ಐವರು ನಕ್ಸಲರ ಎನ್‌ಕೌಂಟರ್‌

ಛತ್ತೀಸಗಢ ನಾರಯಣಪುರ ಜಿಲ್ಲೆಯ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ. ಅಬುಜ್ಮದ್‌ನ ಕೊಹ್ಕಮೇಟಾ ಪೊಲೀಸ್‌ ಠಾಣೆಯ ವ್ಯಾಪ್ತಿಯ ಅರಣ್ಯದಲ್ಲಿ

ನಾರಾಯಣಪುರ : ಛತ್ತೀಸಗಢ ನಾರಯಣಪುರ ಜಿಲ್ಲೆಯ ಸಿಬ್ಬಂದಿ ಹಾಗೂ ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ನಕ್ಸಲರು ಮೃತಪಟ್ಟಿದ್ದಾರೆ. ಅಬುಜ್ಮದ್‌ನ ಕೊಹ್ಕಮೇಟಾ ಪೊಲೀಸ್‌ ಠಾಣೆಯ ವ್ಯಾಪ್ತಿಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Ad
300x250 2

ಎನ್ಕೌಂಟರ್‌ನಲ್ಲಿ ಇದುವರೆಗೆ ಐವರು ನಕ್ಸಲರು ಹತರಾಗಿದ್ದಾರೆ. ಭದ್ರತಾ ಸಿಬ್ಬಂದಿ ಸುರಕ್ಷಿತವಾಗಿದ್ದು, ಘಟನಾ ಸ್ಥಳದಲ್ಲಿ ಶೋಧ ಕಾರ್ಯಚರಣೆ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ. ಇದುವರೆಗೂ ಛತ್ತೀಸ್‌ಗಢದಲ್ಲಿ ನಡೆದ ಕಾರ್ಯಚರಣೆಯಲ್ಲಿ ಒಟ್ಟು 138 ನಕ್ಸಲರು ಮೃತಪಟ್ಟಿದ್ದಾರೆ.

Ad
Ad
Nk Channel Final 21 09 2023
Ad