ಕರ್ನಾಟಕದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮುಲ್ಕಿ,ಉಡುಪಿ, ಕುಶಾಲನಗರ, ಕಳಸ, ಪಣಂಬೂರು, ಸಿದ್ದಾಪುರ, ಮಂಗಳೂರು, ಆಗುಂಬೆ, ತರೀಕೆರೆ, ನಾಯಕನಹಟ್ಟಿಯಲ್ಲಿ ಮಳೆಯಾಗಿದೆ. ಬೆಳ್ತಂಗಡಿ, ನಂಜನಗೂಡು, ಬಾಳೆಹೊನ್ನೂರು, ಮಂಗಳೂರು ವಿಮಾನ ನಿಲ್ದಾಣ, ಕೋಟ, ಕೊಪ್ಪ, ಕಮ್ಮರಡಿ, ದೊಡ್ಡಬಳ್ಳಾಪುರ, ಚನ್ನಗಿರಿ, ಕುಂದಾಪುರ, ಹಾಸನ,ಬರಗೂರು, ಶ್ರವಣಬೆಳಗೊಳದಲ್ಲಿ ಮಳೆಯಾಗಿದೆ.
Ad