ನವದೆಹಲಿ : ಇಂದು ಅರವಿಂದ್‌ ಕೇಜ್ರಿವಾಲ್‌ ಅಕ್ರಮ ಮದ್ಯ ನೀತಿ ಪ್ರಕರಣಕ್ಕೆ ಕುರಿತಂತೆ ನ್ಯಾಯಲಯ ತೀರ್ಪು ನೀಡಿದ್ದು ಅರವಿಂದ್‌ ಕೇಜ್ರಿವಾಲ್‌ ಸಲ್ಲಿಸಿದ್ದ ಜಾಮೀನು ಮನವಿಯನ್ನು ಹೈಕೋರ್ಟ್‌ ರದ್ದು ಮಾಡಿದೆ. ಇದರಿಂದ ಕೇಜ್ರಿವಾಲ್‌ಗೆ ನಿರಾಸೆಯಾಗಿದೆ.

ಅರವಿಂದ್ ಕೇಜ್ರಿವಾಲ್‌ ಇನ್ನೂ ಕೆಲ ದಿನಗಳ ಕಾಲ ತಿಹಾರ್‌ ಜೈಲಿನಲ್ಲಿಯೇ ಉಳಿಯಬೇಕಾಗಿದೆ.ಅರವಿಂದ್‌ ಕೇಜ್ರಿವಾಲ್‌ಗೆ ಜಾಮೀನು ನೀಡಬಾರದು ಎನ್ನುವ ಉದ್ದೇಶದಲ್ಲಿ ಇಡಿ ಸಲ್ಲಿಕೆ ಮಾಡಿರುವ ವಿವರವಾದ ದಾಖಲಾತಿಯನ್ನು ವಿಚಾರಣಾ ಕೋರ್ಟ್‌ ಪರಿಗಣನೆಗೆ ಮಾಡಿಕೊಳ್ಳಬೇಕಿತ್ತು. ಅದನ್ನು ಪರಿಗಣನೆ ಮಾಡದೇ ಜಾಮೀನು ನೀಡಿರುವುದು ತಪ್ಪು ಎಂದು ಕೋರ್ಟ್‌ ಹೇಳಿದೆ.