Bengaluru 22°C
Ad

ದೇವರಲ್ಲಿ ಅಷ್ಟೊಂದು ನಂಬಿಕೆ ಇದ್ದರೆ ಧ್ಯಾನವನ್ನು ಮನೆಯಲ್ಲೇ ಮಾಡಬಹುದು: ಮಲ್ಲಿಕಾರ್ಜುನ ಖರ್ಗೆ

ಮೋದಿ ಅವರಿಗೆ ದೇವರಲ್ಲಿ ಅಷ್ಟೊಂದು ನಂಬಿಕೆ ಇದ್ದರೆ ಆ ಧ್ಯಾನವನ್ನು ಮನೆಯಲ್ಲೇ ಮಾಡಬಹುದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ತೀವ್ರವಾಗಿ ಟೀಕಿಸಿದ್ದಾರೆ. 

ನವದೆಹಲಿ: ಮೋದಿ ಅವರಿಗೆ ದೇವರಲ್ಲಿ ಅಷ್ಟೊಂದು ನಂಬಿಕೆ ಇದ್ದರೆ ಆ ಧ್ಯಾನವನ್ನು ಮನೆಯಲ್ಲೇ ಮಾಡಬಹುದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ತೀವ್ರವಾಗಿ ಟೀಕಿಸಿದ್ದಾರೆ.

Ad
300x250 2

ಮೋದಿಯವರು ಕನ್ಯಾಕುಮಾರಿಗೆ  ಹೋಗಿ ನಾಟಕ ಮಾಡುತ್ತಿದ್ದಾರೆ. ಅವರು ಧ್ಯಾನ ಮಾಡುವ ವೇಳೆ ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಲ್ಲಿ ಇರಿಸಬೇಕು. ಇದರಿಂದ ಸಾರ್ವಜನಿಕರ ಸಾಕಷ್ಟು ಹಣ ಪೋಲಾಗುತ್ತದೆ. ನಿಮ್ಮ ‘ಶೋ’ ದೇಶಕ್ಕೆ ಹಾನಿ ಮಾಡುತ್ತದೆ ಎಂದು ಹೇಳಿದರು.

ಪ್ರಧಾನಿ ಮೋದಿಯವರು ಏನೇ ಹೇಳಿದರೂ ದೇಶದ ಜನತೆ ಅವರ ನಾಯಕತ್ವವನ್ನು ಒಪ್ಪದ ನಿರ್ಧಾರಕ್ಕೆ ಬಂದಿದ್ದಾರೆ. ಹಣದುಬ್ಬರ ಮತ್ತು ನಿರುದ್ಯೋಗ ಈ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ ಎಂದರು.

ಸಂವಿಧಾನ ಮತ್ತು ಪ್ರಜಾಪ್ರಭುತ್ವದಂತಹ ವಿಷಯಗಳು ಜನರ ಮನಸ್ಸಿನಲ್ಲಿವೆ. ಬಿಜೆಪಿ ಆಂಧ್ರದಲ್ಲಿ ಕೆಲವು ಸ್ಥಾನಗಳನ್ನು ಗೆಲ್ಲಬಹುದು. ಆದರೆ ತೆಲಂಗಾಣ, ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಗೆಲ್ಲುತ್ತದೆ. ಉತ್ತರಪ್ರದೇಶದಲ್ಲಿಯೂ ಮೈತ್ರಿಯಿಂದಾಗಿ ಹೆಚ್ಚು ಸ್ಥಾನಗಳನ್ನು ಪಡೆಯುತ್ತೇವೆ ಎಂದು ಹೇಳಿದರು.

Ad
Ad
Nk Channel Final 21 09 2023
Ad