Bengaluru 23°C
Ad

ಸಿಬಿಐ ಬಂಧನ ಪ್ರಶ್ನಿಸಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತಮ್ಮ ಬಂಧನ ಮತ್ತು ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಇಂದು (ಸೋಮವಾರ) ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ನವದೆಹಲಿ:   ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐನಿಂದ ತಮ್ಮ ಬಂಧನ ಮತ್ತು ರಿಮ್ಯಾಂಡ್ ಆದೇಶವನ್ನು ಪ್ರಶ್ನಿಸಿ ಇಂದು (ಸೋಮವಾರ) ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

Ad
300x250 2

ತನಿಖಾ ದೃಷ್ಟಿಯಿಂದ ಕೇಜ್ರಿವಾಲ್ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಬೇಕು ಎಂದು ಸಿಬಿಐ ಅರ್ಜಿಯಲ್ಲಿ ಕೋರಿತ್ತು. ಸಿಬಿಐ ಅರ್ಜಿಯನ್ನು ಅಂಗೀಕರಿಸಿದ ನ್ಯಾಯಾಧೀಶರು, ಅವರಿಗೆ ಜುಲೈ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಅರವಿಂದ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು.

Ad
Ad
Nk Channel Final 21 09 2023
Ad