ಕೇರಳ: ದೇವರ ನಾಡು ಕೇರಳದಲ್ಲಿ ಮಳೆರಾಯ ಆಗಾಗ ಬಂದು ಕಣ್ಣಾ ಮುಚ್ಚಾಲೆ ಆಟ ಆಡ್ತಿದ್ದ. ಆದರೆ ಹಲವು ಕಡೆಗಳಲ್ಲಿ ಮಳೆರಾಯನ ಸಿಂಚನ ರೈತರ ಮೊಗದಲ್ಲಿ ಖುಷಿ ತರಿಸಿದ್ರೆ, ಇನ್ನೂ ಹಲವೆಡೆ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿ ಮಾಡಿದೆ.
ಜೂನ್ 1ರಂದು ಕೇರಳಕ್ಕೆ ಮುಂಗಾರು ಪ್ರವೇಶ ಮಾಡಲಿದೆ. ಆದರೆ ಅದಕ್ಕೂ ಮುನ್ನ ದೇವರನಾಡಲ್ಲಿ ವರುಣನ ರುದ್ರತಾಂಡವ ಶುರುವಾಗಿದೆ. ಮುಂಗಾರು ಪೂರ್ವ ವರುಣಾರ್ಭಟಕ್ಕೆ ಕೇರಳದಲ್ಲಿ ಜಲ ಕಂಟಕ ಎದುರಾಗಿದೆ.
கொச்சி 😷 #Kerala pic.twitter.com/JhKoXr0uJK
— Harish M (@chnmharish) May 28, 2024
ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ರಸ್ತೆಗಳೆಲ್ಲ ಜಲಾವೃತವಾಗಿವೆ. ರಸ್ತೆಗಳಲ್ಲಿ ಮಳೆ ನೀರು ಜೊತೆ ಮರಗಳು ಕಸ-ಕಡ್ಡಿಗಳು ರಸ್ತೆಯಲ್ಲಿ ಬಿದ್ದಿವೆ. ಅಷ್ಟೆಯಲ್ಲ ಈ ರಸ್ತೆಗಳಲ್ಲಿ ವಾಹನಗಳು ಚಲಿಸಲು ಆಗುತ್ತಿಲ್ಲ. ಇದರಿಂದಾಗಿ ಜನರು ಪರದಾಡುವಂತಾಗಿದೆ. ಇನ್ನು ಹಲವೆಡೆ ಗುಡ್ಡ ಕುಸಿತ ಸಂಭವಿಸಿದ್ದು, ಸಂಚಾರ ಅಸ್ತವ್ಯವಸ್ತಗೊಂಡಿದೆ. ಮಳೆಯಿಂದಾಗಿ ಕೇರಳದಲ್ಲಿ ರಸ್ತೆಗಳು ಸಂಪೂರ್ಣವಾಗಿ ಮುಳುಗಿ ಹೋಗಿವೆ. ರಸ್ತೆಯ ಮೇಲೆ ಮೊಣಕಾಲುದ್ದ ಮಳೆ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡಿದಾಗಿದ್ದಾರೆ.
#WATCH : Heavy rain ⛈️continues to lash across #southernKerala. There is a #redalert in #Kottayam and #Ernakulam districts today.#Keralarain pic.twitter.com/34rMhkhigc
— All India Radio News (@airnewsalerts) May 28, 2024
ಕೇರಳದ ಎರ್ನಾಕುಲಂ ಜಿಲ್ಲೆಯ ಕಲಮಸ್ಸೆರಿಯಲ್ಲಿ ಭಾರೀ ಅವಾಂತರ ಸಂಭವಿಸಿದೆ. ಮಳೆ ನೀರು ಜನವಸತಿ ಪ್ರದೇಶಕ್ಕೆ ನುಗ್ಗಿ, ಜನರು ಕಂಗಾಲಾಗಿದ್ದಾರೆ. ಇನ್ನು ಪ್ರವಾಹದಲ್ಲಿ ಸಿಲುಕಿದ್ದವರನ್ನು ಬೋಟ್ಗಳ ಮೂಲಕ ರಕ್ಷಣೆ ಮಾಡಲಾಗಿದೆ.

