ನವದೆಹಲಿ: ತಮಿಳುನಾಡು ಪೊಲೀಸರು ಸದ್ಗುರು ಜಗ್ಗಿ ವಾಸುದೇವ್ ಅವರ ಇಶಾ ಫೌಂಡೇಶನ್ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಿದ ಪ್ರತಿ ಅರ್ಜಿಯಲ್ಲಿ ಪ್ರತಿಷ್ಠಾನಕ್ಕೆ ಹೋದ ಅನೇಕ ಜನರು ನಾಪತ್ತೆಯಾಗಿದ್ದಾರೆ ಮತ್ತು ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
ಈಶಾ ಫೌಂಡೇಶನ್ ಕ್ಯಾಂಪಸ್ ತನ್ನ ಆವರಣದಲ್ಲಿ ಸ್ಮಶಾನವನ್ನು ಹೊಂದಿದೆ ಎಂದು ಅರ್ಜಿಯಲ್ಲಿ ಪೊಲೀಸರು ತಿಳಿಸಿದ್ದಾರೆ. ಜೊತೆಗೆ ಈಶಾ ಫೌಂಡೇಶನ್ನೊಳಗಿನ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ನೀಡಲಾಗುತ್ತಿದೆ ಏಂದು ಕೂಡಾ ಉಲ್ಲೇಖಿಸಲಾಗಿದೆ.
ಸ್ವಾಮಿ ಜಗ್ಗಿ ವಾಸುದೇವ್ ಸ್ಥಾಪಿಸಿದ ಇಶಾ ಫೌಂಡೇಶನ್ಗೆ ಸಂಬಂಧಿಸಿದಂತೆ ಕೊಯಮತ್ತೂರು ಪೊಲೀಸರು ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇಂದು ಜಗ್ಗಿ ವಾಸುದೇವ್ ವಿರುದ್ಧ ತನಿಖೆಗೆ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಸದ್ಗುರು ಇಬ್ಬರು ಹೆಣ್ಣು ಮಕ್ಕಳ ಮನ ಪರಿವರ್ತನೆ ಮಾಡಿ ಅಕ್ರಮವಾಗಿ ತಮ್ಮಲ್ಲಿ ಇಟ್ಟುಕೊಂಡಿದ್ದಾರೆ ಎಂದು ಚೆನ್ನೈ ಮೂಲದ ಕಾಮರಾಜ್ ಎಂಬುವವರು ದೂರು ನೀಡಿದ್ದರು. ಈಶಾ ಫೌಂಡೇಶನ್ ವಿರುದ್ಧ ಮಾಡಿರುವ ಆರೋಪಗಳು ಆಧಾರರಹಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

