ಕನ್ಯಾಕುಮಾರಿ: ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಧ್ಯಾನ ಮಾಡಲಿದ್ದಾರೆ.

ಮೇ 31ರ ಸಂಜೆಯಿಂದ ಜೂನ್ 1ರ ಸಂಜೆಯವರೆಗೆ ಧ್ಯಾನ ಮಂಟಪದಲ್ಲಿ ನರೇಂದ್ರ ಮೋದಿ ಧ್ಯಾನ ಮಾಡಲಿದ್ದಾರೆ.

ಚುನಾವಣೆ ಮುಗಿದ ನಂತರವೂ ಅವರು ಕನ್ಯಾಕುಮಾರಿಗೆ ಭೇಟಿ ನೀಡುತ್ತಿರುವುದು ಪ್ರಧಾನಿಯವರ ಆಳವಾದ ಬದ್ಧತೆ ಮತ್ತು ತಮಿಳುನಾಡಿನ ಮೇಲಿನ ಪ್ರೀತಿಯನ್ನು ತೋರಿಸುತ್ತದೆ.

ನರೇಂದ್ರ ಮೋದಿಯವರು ಕಳೆದ 2 ಬಾರಿಯೂ ಚುನಾವಣೆ ಮುಗಿದ ಬಳಿಕ ಫಲಿತಾಂಶ ಬರುವುದಕ್ಕೂ ಮೊದಲು ಆಧ್ಯಾತ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿದ್ದರು. ಈ ಬಾರಿ ನರೇಂದ್ರ ಮೋದಿ ಅವರು ಮೇ 30ರಂದು ಕನ್ಯಾಕುಮಾರಿ ತಲುಪುತ್ತಾರೆ ಮತ್ತು ಜೂನ್ 1ರವರೆಗೆ ಅಲ್ಲಿಯೇ ಇರುತ್ತಾರೆ.

ಪಾರ್ವತಿ ದೇವಿಯು ಸಹ ಅದೇ ಸ್ಥಳದಲ್ಲಿ ಭಗವಾನ್ ಶಿವನಿಗಾಗಿ ಕಾಯುತ್ತಾ ಒಂದೇ ಕಾಲಿನಲ್ಲಿ ನಿಂತು ಧ್ಯಾನ ಮಾಡಿದ್ದಳು ಎಂಬ ನಂಬಿಕೆಯಿದೆ.