ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ದೇಶದ ಎಲ್ಲಾ ನಾಗರಿಕರಿಗೆ ಶುಭಾಶಯಗಳನ್ನು ಕೋರಿದ್ದಾರೆ.

— PIB in Karnataka (@PIBBengaluru) January 14, 2026

ಪತ್ರದ ಮೂಲಕ ಸಂಕ್ರಾಂತಿ ಮೋದಿ ಶುಭಾಶಯ ತಿಳಿಸಿದ್ದಾರೆ. ಆತ್ಮೀಯ ಸಹ ನಾಗರಿಕರೇ, ಸಂಕ್ರಾಂತಿಯ ಈ ಶುಭ ಸಂದರ್ಭದಲ್ಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆಂದು ತಿಳಿಸಿದ್ದಾರೆ.

ಸೂರ್ಯನ ಪಥ ಬದಲಾವಣೆಯ ಹೊಸ ಆರಂಭವನ್ನು ಸೂಚಿಸುವ ಸಂಕ್ರಾಂತಿಯ ಭರವಸೆ ಮತ್ತು ಸಕಾರಾತ್ಮಕತೆಯ ಸಂಕೇತವಾಗಿದೆ. ದೇಶಾದ್ಯಂತ ವಿವಿಧ ರೂಪಗಳಲ್ಲಿ, ಆದರೆ ಅಷ್ಟೇ ಉತ್ಸಾಹದಿಂದ ಆಚರಿಸಲಾಗುವ ಈ ಹಬ್ಬವು ನಮ್ಮ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ನಮ್ಮನ್ನೆಲ್ಲ ಒಟ್ಟಾಗಿ ಬೆಸೆಯುವ ಒಗ್ಗಟ್ಟಿನ ಭಾವನೆಯನ್ನು ನೆನಪಿಸುತ್ತದೆ.

ಸಂಕ್ರಾಂತಿಯು ನಮ್ಮನ್ನು ಆತ್ಮವಿಶ್ವಾಸ ಮತ್ತು ಆಶಾವಾದದೊಂದಿಗೆ ಮುನ್ನಡೆಯಲು ಪ್ರೋತ್ಸಾಹಿಸುತ್ತದೆ. ನಿಮ್ಮ ಮುಂದಿನ ದಿನಗಳು ಯಾವಾಗಲೂ ಸಮೃದ್ಧಿ, ಸಕಾರಾತ್ಮಕತೆ ಮತ್ತು ಉತ್ತಮ ಆರೋಗ್ಯದಿಂದ ಕೂಡಿರಲಿ ಎಂದು ಮೋದಿ ಆಶಿಸಿದ್ದಾರೆ.