ಕನ್ಯಾಕುಮಾರಿ : ಲೋಕಸಭಾ ಚುನಾವಣೆಯ ಅಬ್ಬರದ ಪ್ರಚಾರದ ಬಳಿಕ ಕನ್ಯಾಕುಮಾರಿಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಧ್ಯಾನದಲ್ಲಿ ಮಗ್ನರಾಗಿದ್ದಾರೆ. ವಿವೇಕಾನಂದ ಸ್ಮಾರಕದಲ್ಲಿ ಗುರುವಾರ ಸಂಜೆ ಆರಂಭಿಸಿರುವ 45 ತಾಸುಗಳ ಧ್ಯಾನವನ್ನು ಪೂರ್ಣಗೊಳಿಸಿದ್ದಾರೆ. ಈ ಕುರಿತು ಸುದ್ದಿಸಂಸ್ಥೆ ಎಎನ್ಐ ವರದಿ ಮಾಡಿದೆ.
ಲೋಕಸಭೆಗೆ ಏಳನೇ ಹಂತದ ಮತದಾನ ಇಂದು ನಡೆಯುತ್ತಿರುವಂತೆಯೇ ಎರಡು ದಿನಗಳ ಕಾಲ ಪ್ರಧಾನಿ ಧ್ಯಾನದಲ್ಲಿ ಮಗ್ನರಾಗಿರುವುದನ್ನು ಮತದಾರರನ್ನು ಸೆಳೆಯುವ ಪ್ರಚಾರ ತಂತ್ರವಾಗಿದೆ ಎಂದು ವಿಪಕ್ಷಗಳು ಆರೋಪಿಸಿದ್ದವು. ಆದರೆ ಆರೋಪವನ್ನು ಆಡಳಿತಾರೂಢ ಬಿಜೆಪಿ ನಿರಾಕರಿಸಿತ್ತು.
Ad