ಲಕ್ನೋ: ಉತ್ತರ ಪ್ರದೇಶದ ಗೋಂಡಾದಲ್ಲಿ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಅವರ ಪುತ್ರ ಕರಣ್‌ ಭೂಷಣ್‌ ಸಿಂಗ್‌  ಅವರ ಬೆಂಗಾವಲು ಪಡೆಗೆ ಸೇರಿದ ಟೊಯೊಟಾ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ  ನಡೆದಿದೆ.

ರೇಹಾನ್‌ (17) ಮತ್ತು ಶಹಜಾನ್‌ (24) ಎಂಬ ಯುವಕರು ಮೃತಪಟ್ಟಿದ್ದಾರೆ.

ಇಬ್ಬರು ಯುವಕರು ಔಷಧಿ ಖರೀದಿಸಲು ಬೈಕ್‌ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ ವೇಗವಾಗಿ ಬಂದ ಎಸ್‌ಯುವಿ ಡಿಕ್ಕಿ ಹೊಡೆದಿದೆ. ಬಳಿಕ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಜನರು ಜಮಾಯಿಸಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಮೃತರ ತಾಯಿ ಚಂದಾ ಬೇಗಂ ಎಂಬವರು ದೂರು ದಾಖಲಿಸಿದ್ದು, ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು  ಚಾಲಕನನ್ನ ಬಂಧಿಸಿ, ಎಸ್‌ಯುವಿ ಅನ್ನು ವಶಪಡಿಸಿಕೊಂಡಿದ್ದಾರೆ.  ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

ಆದ್ರೆ ಅಪಘಾತ ಸಂದರ್ಭದಲ್ಲಿ ಕರಣ್‌ ಭೂಷಣ್‌ ಸಿಂಗ್‌ ಪ್ರಯಾಣಿಸುತ್ತಿದ್ದರೇ ಅನ್ನೂ ಬಗ್ಗೆ ಸ್ಪಷ್ಟನೆ ಇಲ್ಲ.