ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ದಾಳಿ ನಡೆಸಿದ ಭಯೋತ್ಪಾದಕರಿಗೆ ಸಹಕಾರ ನೀಡಿದ ಆರೋಪದಲ್ಲಿ ಓರ್ವ ವ್ಯಕ್ತಿಯನ್ನು ರಜೌರಿಯಲ್ಲಿ ವಶಕ್ಕೆ ಪಡೆಯಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ರಿಯಾಸಿಯ ಹಿರಿಯ ಪೊಲೀಸ್ ಅಧೀಕ್ಷಕ ಮೋಹಿತಾ ಶರ್ಮಾ ಅವರು, ರಿಯಾಸಿ ಭಯೋತ್ಪಾದನಾ ದಾಳಿಯಲ್ಲಿ ಓರ್ವನನ್ನು ಬಂಧಿಸಲಾಗಿದೆ. ಈತ ಕೃತ್ಯದ ಮಾಸ್ಟರ್ ಮೈಂಡ್ ವ್ಯಕ್ತಿಯಲ್ಲ.
ಆದರೆ ದಾಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎಂದು ಹೇಳಿದ್ದಾರೆ. ಆರೋಪಿ ಹಕೀಮ್ ದಿನ್ ರಾಜೌರಿ ನಿವಾಸಿಯಾಗಿದ್ದು ಭಯೋತ್ಪಾದಕರಿಗೆ ದಾಳಿ ನಡೆಸಲು ಸಾಮಾಗ್ರಿಗಳನ್ನು ಒದಗಿಸಿದ ಆರೋಪ ಕೇಳಿ ಬಂದಿದೆ.

