ಮಣಿಪುರ: ಜಿರಿಬಾಮ್​ನಲ್ಲಿ ಸಿಆರ್​ಪಿಎಫ್​, ಪೊಲೀಸರ ಜಂಟಿ ಪಡೆಯ ಮೇಲೆ ದುಷ್ಕರ್ಮಿಗಳು ಹೊಂಚು ದಾಳಿ ನಡೆಸಿದ್ದು, ಓರ್ವ ಯೋಧ ಮೃತೊಟ್ಟಿದ್ದು, ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 9.40ರ ಸುಮಾರಿಗೆ ದಾಳಿ ನಡೆಸಿದ್ದಾರೆ.

ಬೆಟಾಲಿಯನ್ ಸಿಆರ್​ಪಿಎಫ್​ ಮತ್ತು ಜಿರಿಬಾಮ್ ಜಿಲ್ಲಾ ಪೊಲೀಸರ ಜಂಟಿ ತಂಡವು ಒಟ್ಟಾಗಿ ಕಾರ್ಯಾಚರಣೆಯಲ್ಲಿ ತೊಡದ್ದ ವೇಳೆಯಲ್ಲಿ ಜಂಟಿ ತಂಡದ ಮೇಲೆ ದುಷ್ಕರ್ಮಿಗಳು ಹೊಂಚು ದಾಳಿ ನಡೆಸಿದ್ದರು.

ಇನ್ನು ಈ ದಾಳಿಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದು, ಯೋಧರೊಬ್ಬರು ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಮೃತಪಟ್ಟ ಯೋಧ ಸಿಆರ್​ಪಿಎಫ್​ನ ಭಾಗವಾಗಿದ್ದರು. ಅವರನ್ನು ಬಿಹಾರದ ನಿವಾಸಿ ಅಜಯ್​ ಕುಮಾರ್​ ಝಾ ಎಂದು ಗುರುತಿಸಲಾಗಿದೆ.