ನವದೆಹಲಿ: ಆಂಧ್ರಪ್ರದೇಶದ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ತೆಲುಗು ದೇಶಂ ಪಾರ್ಟಿ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಮ್ಯಾಜಿಕ್ ನಂಬರ್ ರೀಚ್ ಆಗದ ಹಿನ್ನಲೆಯಲ್ಲಿ ಮುಂದಿನ ಸರ್ಕಾರದ ಬಗ್ಗೆ ತೀವ್ರ ಕುತೂಹಲ ಉಂಟಾಗಿದೆ. ಇದರ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಟಿಡಿಪಿ ನಾಯಕ ಹಾಗೂ ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ. ಈ ವೇಳೆ ಚಂದ್ರಬಾಬು ನಾಯ್ದು ತಾವು ಎನ್ಡಿಎ ಭಾಗವಾಗಿಯೇ ಇರುವುದಾಗಿ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ವರದಿ ಮಾಡಿದೆ.

