ಮುಂಬೈ : ಮುಂಬೈ ಬಿಎಂಡಬ್ಲ್ಯು ಹಿಟ್ ಅಂಡ್ ರನ್ ಕರಣದ ಆರೋಪಿ ಮಿಹಿರ್ ಶಾ ಅವರ ತಂದೆ ರಾಜೇಶ್ ಶಾ ಅವರನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಶಿವಸೇನೆಯ ಉಪ ನಾಯಕ ಸ್ಥಾನದಿಂದ ಬುಧವಾರ ವಜಾಗೊಳಿಸಿದ್ದಾರೆ.

45 ವರ್ಷದ ಮಹಿಳೆ ಕಾವೇರಿ ನಖ್ವಾ ಅವರ ಸಾವಿಗೆ ಕಾರಣವಾದ ರಾಜೇಶ್ ಮಿಹಿರ್‌ ಶಾ ಅವರನ್ನು ವಜಾ ಮಾಡಲಾಗಿದೆ. ಗುದ್ದೋಡು ಪ್ರಕರಣ ನಡೆದು ಎರಡು ದಿನಗಳ ನಂತರ ಮುಂಬೈ ಪೊಲೀಸರು ಮಂಗಳವಾರ ವಿರಾರ್‌ನಿಂದ ಮಿಹಿರ್ ಶಾ ಅವರನ್ನು ಬಂಧಿಸಿದ್ದಾರೆ.

ಏನಿದು ಪ್ರಕರಣ,
ಜುಲೈ 7, ಭಾನುವಾರದಂದು ವರ್ಲಿಯ ಡಾ. ಅನ್ನಿ ಬೆಸೆಂಟ್ ರಸ್ತೆಯಲ್ಲಿ ಮಿಹಿರ್ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದು ಮಹಿಳೆ ಸಾವಿಗೀಡಾದ ನಂತರ ಶಾ ತಲೆಮರೆಸಿಕೊಂಡಿದ್ದರು. ಅವರನ್ನು ಬಂಧಿಸಲು ಮುಂಬೈ ಪೊಲೀಸರು ಹದಿನಾಲ್ಕು ತಂಡಗಳನ್ನು ರಚಿಸಿದ್ದರು,