ನವದೆಹಲಿ: ಸಂಸದೆ ಸ್ವಾತಿ ಮಲಿವಾಲ್ ಮೇಲೆ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಹಲ್ಲೆ ನಡೆಸಿದ ಆರೋಪ ಪ್ರಕರಣದ ಬಗ್ಗೆ ಕೊನೆಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರತಿಕ್ರಿಯೆ ನೀಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಪ್ರಕರಣದಲ್ಲಿ ಎರಡೂ ಕಡೆಯಿಂದ ದೂರುಗಳಿವೆ. ಆದರೆ ನಾನು ನ್ಯಾಯಯುತ ತನಿಖೆಯನ್ನು ನಿರೀಕ್ಷಿಸುತ್ತೇನೆ. ನ್ಯಾಯವನ್ನು ಒದಗಿಸಬೇಕು. ಪೊಲೀಸರು ಎರಡೂ ಆವೃತ್ತಿಗಳನ್ನು ನ್ಯಾಯಯುತವಾಗಿ ತನಿಖೆ ಮಾಡಬೇಕು ಮತ್ತು ನ್ಯಾಯ ಒದಗಿಸಬೇಕು ಎಂದು ಹೇಳಿದ್ದಾರೆ.
ಅರವಿಂದ್ ಕೇಜ್ರಿವಾಲ್ ಆಪ್ತ ಸಹಾಯಕ ಬಿಭವ್ ಕುಮಾರ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮೇ 13 ರಂದು ಸ್ವಾತಿ ಮಲಿವಾಲ್ ಪೊಲೀಸರಿಗೆ ದೂರು ನೀಡಿದ್ದರು.
Ad