ಚಂಡೀಗಢ: ಇಬ್ಬರು ಮುಖ್ಯಮಂತ್ರಿಗಳ ಬಂಧನವಾಗಿದೆ. ಆದರೆ ಬುಡಕಟ್ಟು ಸಮುದಾಯದ ಸಿಎಂ ಮಾತ್ರ ಇನ್ನೂ ಜೈಲಿನಲ್ಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಬಂಧನಗಳ ನಡುವೆ ಹೋಲಿಕೆ ಮಾಡಿದ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಹರಿಯಾಣದ ಪಂಚಕುಲದಲ್ಲಿ ‘ಸಂವಿಧಾನ್ ಸಮ್ಮಾನ್ ಸಮ್ಮೇಳನ’ ಉದ್ದೇಶಿಸಿ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ಇಬ್ಬರು ಮುಖ್ಯಮಂತ್ರಿಗಳನ್ನು ಬಂಧಿಸಲಾಯಿತು. ಬುಡಕಟ್ಟು ಸಿಎಂ ಹೇಮಂತ್ ಸೋರೆನ್ ಇನ್ನೂ ಜೈಲಿನಲ್ಲಿದ್ದಾರೆ. ಅವರು ಮೊದಲು ಅರೆಸ್ಟ್ ಆದರು. ಇನ್ನೂ ಕಂಬಿಗಳ ಹಿಂದೆ ಇದ್ದಾರೆ.
ರಾಷ್ಟ್ರೀಯ ಮಾಧ್ಯಮಗಳು ಅವರನ್ನು ಮರೆತಿವೆ. ಅವರ ಬಗ್ಗೆ ಮಾತನಾಡುವುದಿಲ್ಲ. ಮಾಯಾವತಿ ಭ್ರಷ್ಟ ಆದರೆ ನವೀನ್ ಪಟ್ನಾಯಕ್ ಅಲ್ಲ. ಯಾರಾದರೂ ಬುಡಕಟ್ಟು ಅಥವಾ ದಲಿತರಾಗಿದ್ದರೆ, ಅವರು ಸ್ವಯಂಚಾಲಿತವಾಗಿ ಚೌಕಟ್ಟಿಗೆ ಒಳಗಾಗುತ್ತಾರೆ ಎಂದು ತಾರತಮ್ಯ ಕುರಿತು ಪ್ರಶ್ನಿಸಿದ್ದಾರೆ.
ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯ ಈ ವರ್ಷದ ಜನವರಿಯಲ್ಲಿ ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ನ್ಯಾಯಾಲಯದಿಂದ ಯಾವುದೇ ಮಧ್ಯಂತರ ಪರಿಹಾರ ಪಡೆಯಲು ಸಾಧ್ಯವಾಗಲಿಲ್ಲ.
ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ನಲ್ಲಿ ಇಡಿ ಬಂಧಿಸಿತ್ತು. ಅವರಿಗೆ ಸುಪ್ರೀಂ ಕೋರ್ಟ್ ಜೂನ್ 1 ರ ವರೆಗೆ ಮಧ್ಯಂತರ ಜಾಮೀನು ನೀಡಿದೆ.