ತಮಿಳುನಾಡು: ತಮಿಳುನಾಡಿನ ವಿರೋಧ ಪಕ್ಷವಾದ ಎಐಎಡಿಎಂಕೆ ಲೋಕಸಭೆಯಲ್ಲಿ ಹೀನಾಯ ಸೋಲು ಕಂಡ ನಂತರ, ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ನಿಕಟವರ್ತಿ ವಿಕೆ ಶಶಿಕಲಾ ರಾಜಕೀಯಕ್ಕೆ ಮರಳುವುದಾಗಿ ಘೋಷಿಸಿದರು.
ಈ ಹಿಂದೆ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಪ್ರಭಾವಿ ಸ್ಥಾನವನ್ನು ಹೊಂದಿದ್ದ ಶಶಿಕಲಾ ದೀರ್ಘಾವಧಿಯ ಗೈರು ಬಳಿಕ ರಾಜಕೀಯಕ್ಕೆ ಮರುಪ್ರವೇಶಿಸುವುದಾಗಿ ತಿಳಿಸಿದರು.
ಪಕ್ಷದ ನಿಷ್ಠಾವಂತರಿಂದ ಪ್ರೀತಿಯಿಂದ ಚಿನಮ್ಮ ಎಂದು ಕರೆಯಲ್ಪಡುವ ಅವರು 2026 ರ ವಿಧಾನಸಭಾ ಚುನಾವಣೆಯಲ್ಲಿ ಎಐಎಡಿಎಂಕೆಯನ್ನು ಮತ್ತೆ ಅಧಿಕಾರಕ್ಕೆ ತರುವ ಪ್ರತಿಜ್ಞೆ ಮಾಡಿದರು.
ನಾವು 2026 ರಲ್ಲಿ ಸರ್ಕಾರವನ್ನು ರಚಿಸುತ್ತೇವೆ, ಅದೂ ಕೂಡ ಸಂಪೂರ್ಣ ಬಹುಮತದೊಂದಿಗೆ ಎಂದು ಅವರು ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ಆದ ದೊಡ್ಡ ನಷ್ಟದ ಬಗ್ಗೆ ಮಾತನಾಡಿದ ಅವರು, ಸೋಲಿಗೆ ಕೆಲವು ಸ್ವಾರ್ಥಿಗಳ ಕೃತ್ಯವೇ ಕಾರಣ. ನಾನು ಇದನ್ನೆಲ್ಲಾ ತಾಳ್ಮೆಯಿಂದ ನೋಡುತ್ತಿದ್ದೇನೆ ಎಂದು ಹೇಳಿದರು.
Ad