Showing 20 of 2213 posts • Page 10 of 111
ವಾಣಿಜ್ಯ ಎಲ್ಪಿಜಿ ಪೂರೈಕೆಯಲ್ಲಿನ ಅಡಚಣೆಯಿಂದಾಗಿ ಮುಂಬೈನಲ್ಲಿ ಸುಮಾರು 20% ಹೋಟೆಲ್ಗಳು ಮತ್ತು ರೆಸ್ಟೋರೆಂಟ್ಗಳು ಬಂದ್ ಆಗಿವೆ ಎಂದು ನಗರದ ಹೋಟೆಲ್ ಮತ್ತು ರೆಸ್ಟೋರೆಂಟ್ ಸಂಘ AHAR ತಿಳಿಸಿದೆ.
ಅಂತಾರಾಷ್ಟ್ರೀಯ ಕಚ್ಚಾ ತೈಲ ದರ ಬ್ಯಾರೆಲ್ಗೆ 100 ಡಾಲರ್ ದಾಟಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಸದ್ಯಕ್ಕೆ ಹೆಚ್ಚಿಸಲಾಗುವುದಿಲ್ಲ ಎಂದು ಸರಕಾರಿ ಮೂಲಗಳು ಸೋಮವಾರ ತಿಳಿಸಿವೆ. ದೇಶಾದ್ಯಂತ ನಿರಂತರ ಇಂಧನ ಪೂರೈಕೆ ಮಾರ್ಗಗಳನ್ನು ನಿರ್ವಹಿಸಲು ಅಧಿಕಾರಿಗಳು ಪ್ರಯತ್ನಗಳನ್ನು ಹೆಚ್ಚಿಸಿದ್ದಾರೆ.
ನವದೆಹಲಿ: ಕಾಳ ಸಂತೆಯಲ್ಲಿ ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ಎಲ್ಪಿಜಿ ಸಿಲಿಂಡರ್ ಕನಿಷ್ಠ ಬುಕ್ಕಿಂಗ್ ಅವಧಿಯನ್ನು 21 ರಿಂದ 25 ದಿನಗಳಿಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ 55 ದಿನಗಳಲ್ಲಿ ಎಲ್ಪಿಜಿ ಸಿಲಿಂಡರ್ಗಳನ್ನು ಬುಕ್ ಮಾಡುತ್ತಿದ್ದ ಜನರು ಇರಾನ್ ಯುದ್ಧದ ಬಳಿಕ 15 ದಿನಗಳಲ್ಲಿ ಸಿಲಿಂಡರ್ಗಳನ್ನು ಬುಕ್ಕಿಂಗ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಗೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್ಪಿಜಿ ಉತ್ಪಾದನೆಯನ್ನು ಹೆಚ್ಚಿಸಲು ಸಂಸ್ಕರಣಾಗಾರಗಳಿಗೆ ಸೂಚಿಸಿದ ಕೇಂದ್ರ ಸರ್ಕಾರ ವಾಣಿಜ್ಯ ಸಂಪರ್ಕಗಳಿಗಿಂತ […]
ಒಡಿಶಾದ ಪುರಿ ಜಗನ್ನಾಥ ದೇವಾಲಯದ ಪವಿತ್ರ ‘ಪತಿತಪಾವನ ಬಾನಾ’ (ಧ್ವಜ) ಮತ್ತು ನೀಲಚಕ್ರದ ಮೇಲೆ ಹದ್ದೊಂದು ಕುಳಿತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಪ್ರತಿಭಟಿಸಿ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಹೇರಲಾಗಿದ್ದ ಬಂದ್ ಅಂತ್ಯಗೊಂಡಿದೆ. ಸೋಮವಾರದಿಂದ ಕಾಶ್ಮೀರದಾದ್ಯಂತ ಎಲ್ಲಾ ಶಾಲಾ-ಕಾಲೇಜುಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಅಧಿಕೃತವಾಗಿ ಆರಂಭಗೊಂಡಿದೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಉಲ್ಬಣಗೊಂಡಿದ್ದು, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧವು 11ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮವಾಗಿ ಕಚ್ಚಾ ತೈಲ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಮೌಲಾನಾ ಅಬ್ದುಲ್ಲಾ ಸಲೀಂ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಸಂಬಂಧ 83 ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದು, ಹಿಂದೂ ಸಂಘಟನೆಗಳು ತಕ್ಷಣದ ಬಂಧನಕ್ಕೆ ಆಗ್ರಹಿಸಿವೆ.
ರಾಷ್ಟ್ರ ರಾಜಧಾನಿ ದೆಹಲಿಯ ಉತ್ತಮ್ ನಗರದ ಜೆಜೆ ಕಾಲೋನಿಯಲ್ಲಿ ಹೋಳಿ ಬಲೂನ್ ನೀರು ಮಹಿಳೆಯೊಬ್ಬರ ಮೇಲೆ ಬಿದ್ದಿದ್ದರಿಂದ ಸಂಘರ್ಷ ಉಂಟಾಗಿದ್ದು, ಘಟನೆಯಲ್ಲಿ ತರುಣ್ (26) ಎಂಬ ಯುವಕ ಹತ್ಯೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಅಪ್ರಾಪ್ತನನ್ನು ವಶಕ್ಕೆ ಪಡೆಯಲಾಗಿದೆ.
ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಪ್ರಯಾಣಿಸ್ತಿದ್ದ ಹೆಲಿಕಾಪ್ಟರ್ ತಾಂತ್ರಿಕ ಸಮಸ್ಯೆಯಿಂದಾಗಿ ಲಕ್ನೋಗೆ ವಾಪಸ್ ಆಗಿ, ತುರ್ತು ಲ್ಯಾಂಡಿಂಗ್ ಆಗಿದೆ.
ಉತ್ತರ ಕೋಲ್ಕತ್ತಾದ ಪೈಕ್ಪಾರಾದ ಪಾಳುಬಿದ್ದ ಕ್ಲಬ್ನ ಬೀಗ ಹಾಕಿದ ಕೋಣೆಯೊಳಗೆ ಕಚ್ಚಾ ಬಾಂಬ್ಗಳು ಶನಿವಾರ ಮುಂಜಾನೆ ಸ್ಫೋಟಗೊಂಡ ನಂತರ ಭೀತಿ ಆವರಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಸ್ರೇಲ್ ಮತ್ತು ಅಮೆರಿಕದೊಂದಿಗಿನ ಯುದ್ಧದ ಸಮಯದಲ್ಲಿ ನೆರೆಯ ರಾಷ್ಟ್ರಗಳ ಮೇಲೆ ನಡೆಸಿದ ದಾಳಿಗಳಿಗೆ ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಕ್ಷಮೆಯಾಚಿಸಿದ್ದಾರೆ.
ಆಂಧ್ರಪ್ರದೇಶ ಸರ್ಕಾರ 13 ವರ್ಷದ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸಿ ಘೋಷಣೆ ಮಾಡಿದೆ.
ದೇಶೀಯ ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಬೆಲೆಗಳನ್ನು ಹೆಚ್ಚಿಸಲಾಗಿದ್ದು, ಇಂದಿನಿಂದ ಜಾರಿಗೆ ಬರಲಿದೆ. ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಹೆಚ್ಚುತ್ತಿರುವ ಇಂಧನ ವೆಚ್ಚಗಳ ಮಧ್ಯೆ ಇದು ಬಂದಿದೆ.
ಅಸ್ಸಾಂನ ಕರ್ಬಿ ಆಂಗ್ಲಾಂಗ್ ಜಿಲ್ಲೆಯಲ್ಲಿ ತರಬೇತಿ ಕಾರ್ಯಾಚರಣೆಯ ಸಮಯದಲ್ಲಿ IAF Su-30MKI ಜೆಟ್ ಪತನಗೊಂಡ ನಂತರ ಇಬ್ಬರು ಭಾರತೀಯ ವಾಯುಪಡೆಯ (ಐಎಎಫ್) ಪೈಲಟ್ಗಳು ಸಾವನ್ನಪ್ಪಿದ್ದಾರೆ.
ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ.
ಭಾರತೀಯ ರಾಯಭಾರ ಕಚೇರಿಯು ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ ಮತ್ತು ಸಾರಿಗೆ, ಆಹಾರ, ವಸತಿ ವ್ಯವಸ್ಥೆ ಮಾಡಿದೆ.
ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ 10ರಿಂದ 50 ವರ್ಷದ ಒಳಗಿನ ಮಹಿಳೆಯರಿಗೆ ಪ್ರವೇಶ ಕಲ್ಪಿಸುವುದನ್ನು ವಿರೋಧಿಸಿ ದೇವಸ್ಥಾನದ ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿದೆ.
ಇರಾನ್ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯಿಂದ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆದಿದ್ದು, ಜಮ್ಮ ಮತ್ತು ಕಾಶ್ಮೀರದಲ್ಲಿ ಭುಗಿಲೆದ್ದಿದ್ದವು.
ಇರಾನ್-ಇಸ್ರೇಲ್ ಯುದ್ಧ ಸನ್ನಿವೇಶದಲ್ಲಿ ಸಂಕಷ್ಟದಲ್ಲಿ ಸಿಲುಕಿದ ಎಲ್ಲಾ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಕೇಂದ್ರ ಸರ್ಕಾರ ಸನ್ನದ್ಧವಾಗಿದೆ. ಅಲ್ಲಿನ ರಾಯಭಾರಿ ಕಚೇರಿಯ ಉನ್ನತ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯ ಬೆನ್ನಲ್ಲೇ ಗಲ್ಫ್ ರಾಷ್ಟ್ರಗಳಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಅಲ್ಲಿ ನೆಲೆಸಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಗಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಿವಾರ ಪತ್ರ ಬರೆದಿದ್ದಾರೆ.