Showing 20 of 2385 posts • Page 14 of 120
ವಾಲ್ಪಾರೈನಲ್ಲಿ ಪ್ರವಾಸಿ ಟಿಟಿ ವ್ಯಾನ್ ಕಂದಕಕ್ಕೆ ಉರುಳಿ ಬಿದ್ದು ಒಂಬತ್ತು ಶಿಕ್ಷಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಟಿಸಿಎಸ್ ಹೆಚ್ಆರ್ ಮ್ಯಾನೇಜರ್ ನಿಧಾ ಖಾನ್ಗೆ ಸಂಕಷ್ಟ! ಕೋರ್ಟ್ನಲ್ಲಿ ಗರ್ಭಿಣಿ ಎಂಬ ವಾದ ಮಂಡಿಸಿದ ಪ್ರಮುಖ ಆರೋಪಿ.
2027ರಲ್ಲಿ ಉತ್ತರಾಖಂಡದ ಪವಿತ್ರ ನಗರಿ ಹರಿದ್ವಾರದಲ್ಲಿ ನಡೆಯಲಿರುವ ಅರ್ಧ ಕುಂಭಮೇಳದ ದಿನಾಂಕಗಳನ್ನು ಮೇಳ ಆಡಳಿತ ಮಂಡಳಿಯು ಮಂಗಳವಾರ ಅಧಿಕೃತವಾಗಿ ಪ್ರಕಟಿಸಿದೆ.
ಮಲೇಷಿಯಾಗೆ ತೆರಳುತ್ತಿದ್ದ ದೋಣಿ ಮುಳುಗಿದ ಪರಿಣಾಮ ಅಂಡಮಾನ್ ಸಮುದ್ರದಲ್ಲಿ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶಿಗರು ಸೇರಿ ಕನಿಷ್ಠ 250 ಮಂದಿ ನಾಪತ್ತೆಯಾಗಿದ್ದಾರೆ ಎಂದು ವಿಶ್ವಸಂಸ್ಥೆಯ ನಿರಾಶ್ರಿತರು ಮತ್ತು ವಲಸೆ ಸಂಸ್ಥೆ ತಿಳಿಸಿದೆ.
ತಾಲ್ಲೂಕಿನ ವಿರುಪಾಪೂರು ಸೀಮಾದ ನ್ಯಾಷನಲ್ ಲೇಔಟ್ನ ಶೆಡ್ ಒಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಗ್ರಾಮೀಣ ಪೊಲೀಸರು ದಾಳಿ ನಡೆಸಿ, ಓರ್ವ ಯುವತಿಯನ್ನು ರಕ್ಷಿಸಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.
ಇದು ಅತಿ ವೇಗಕ್ಕಿಂತ ಹೆಚ್ಚಾಗಿ ಚಾಲಕನ ಬೇಜವಾಬ್ದಾರಿಯಿಂದ ಈ ಅಪಘಾತ ನಡೆದಿದೆ. ರಸ್ತೆ ತುಂಬಾ ಕಿರಿದಾಗಿದ್ದು, ಎದುರಿನಿಂದ ಮತ್ತೊಂದು ಲಾರಿ ಬರುತ್ತಿದ್ದಾಗ ಟಿಪ್ಪರ್ ಚಾಲಕ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ಸ್ಕೂಟರ್ಗೆ ನೇರವಾಗಿ ಡಿಕ್ಕಿ ಹೊಡೆದಿದ್ದಾನೆ.
ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಇಬ್ಬರು ಎಂಬಿಎ ವಿದ್ಯಾರ್ಥಿಗಳು ಡ್ರಗ್ ಓವರ್ ಡೋಸ್ನಿಂದ ಮೃತಪಟ್ಟಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗಿರುವ ಭಾರತೀಯ ತೈಲ ಟ್ಯಾಂಕರ್ಗಳಿಗೆ ಇರಾನ್ ಯಾವುದೇ ಶುಲ್ಕವನ್ನು ವಿಧಿಸಿಲ್ಲ ಎಂದು ಇರಾನ್ ರಾಯಭಾರಿ ಮೊಹಮ್ಮದ್ ಫಥಾಲಿ ಸ್ಪಷ್ಟಪಡಿಸಿದ್ದಾರೆ.
ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಹಿಂಗೋಲಿ ಜಿಲ್ಲೆಯ ಕೆಲವು ಭಾಗಗಳಲ್ಲಿ 4.7 ತೀವ್ರತೆಯ ಭೂಕಂಪನ ಶನಿವಾರ ಬೆಳಗ್ಗೆ ಸಂಭವಿಸಿದೆ. ನೆರೆಯ ನಾಂದೇಡ್ ಮತ್ತು ಪರ್ಭಾನಿ ಜಿಲ್ಲೆಯಲ್ಲಿ ಭೂಕಂಪನದ ಅನುಭವವಾಗಿದೆ. ಈ ಘಟನೆಯಲ್ಲಿ ತಕ್ಷಣಕ್ಕೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.
1999ರ ಕಾರ್ಗಿಲ್ ಯುದ್ಧದ ವೀರ, ‘ಲಯನ್ ಆಫ್ ಲಡಾಖ್’ ಎಂದೇ ಖ್ಯಾತರಾಗಿದ್ದ ಮಹಾವೀರ ಚಕ್ರ ಪುರಸ್ಕೃತ ನಿವೃತ್ತ ಕರ್ನಲ್ ಸೋನಮ್ ವಾಂಗ್ಚುಕ್ (61) ಅವರು ಏಪ್ರಿಲ್ 10, ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತದೆ ಎಂದು ಪ್ರಿಯಕರನ ಜೊತೆ ಸೇರಿಕೊಂಡು ಹೆತ್ತ ಮಗನನ್ನೇ ತಾಯಿ ಹತ್ಯೆ ಮಾಡಿರುವ ಘಟನೆ ಪುಣೆಯಲ್ಲಿ ನಡೆದಿದೆ.
ಬಸ್ಗೆ ಕಂಟೇನರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಪೊಲೀಸರು ಸೇರಿದಂತೆ 32 ಮಂದಿ ಗಾಯಗೊಂಡಿರುವ ಘಟನೆ ಕೊಯ್ಲಾಂಡಿಯಲ್ಲಿ ಇಂದು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಂದೇ ಭಾರತ್ ರೈಲುಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸುತ್ತಿರುವುದು ಹೆಚ್ಚಾಗುತ್ತಿದೆ. ಕೇರಳದ ಎರ್ನಾಕುಲಂನಿಂದ ಬೆಂಗಳೂರಿಗೆ ತೆರಳುತ್ತಿದ್ದ ರೈಲಿಗೆ ದುಷ್ಕರ್ಮಿಗಳು ಕಲ್ಲು ಹೊಡೆದಿದ್ದು, ರೈಲಿನ ಗಾಜುಗಳಿಗೆ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮಥುರಾ ಜಿಲ್ಲೆಯ ಕೇಶಿ ಘಾಟ್ನಲ್ಲಿ ಯಮುನಾ ನದಿಯಲ್ಲಿ 30ಕ್ಕೂ ಹೆಚ್ಚು ಪಂಜಾಬ್ ಮೂಲದ ಯಾತ್ರಾರ್ಥಿಗಳಿದ್ದ ದೋಣಿ ಮಗುಚಿ ಬಿದ್ದ ಪರಿಣಾಮ ಕನಿಷ್ಠ 10 ಜನರು ಮೃತಪಟ್ಟಿದ್ದಾರೆ. ದೋಣಿಯಲ್ಲಿದ್ದ ಇತರ 22 ಪ್ರಯಾಣಿಕರನ್ನು ರಕ್ಷಿಸಲಾಗಿದೆ.
ಮನುಷ್ಯನನ್ನು ಮತ್ತೆ ಚಂದ್ರನ ಕಕ್ಷೆಗೆ ಕಳುಹಿಸಿದ ನಾಸಾದ ಐತಿಹಾಸಿಕ ‘ಆರ್ಟೆಮಿಸ್ 2’ ಬಾಹ್ಯಾಕಾಶ ಯಾನ ಇದೀಗ ಅಂತಿಮ ಹಂತದಲ್ಲಿದೆ. ಈ 10 ದಿನಗಳ ರೋಚಕ ಪಯಣದಲ್ಲಿ ಗಗನಯಾತ್ರಿಗಳ ಆರೋಗ್ಯ ಕಾಪಾಡಲು ಅವರ ಪ್ರಥಮ ಚಿಕಿತ್ಸಾ ಪೆಟ್ಟಿಗೆಯಲ್ಲಿ ಜೀರ್ಣಕ್ರಿಯೆ ಹಾಗೂ ಮಲಬದ್ಧತೆ ನಿವಾರಕ ಔಷಧ ‘ಡಲ್ಕೋಲಾಕ್ಸ್’ ಕೂಡ ಸ್ಥಾನ ಪಡೆದಿದೆ. ಭಾರತದಲ್ಲಿ ಈ ಔಷಧಿಯನ್ನು ‘ಡಲ್ಕೋಫ್ಲೆಕ್ಸ್’ ಎಂಬ ಹೆಸರಿನಿಂದ ಕರೆಯಲಾಗುತ್ತದೆ.
ಮೋದಿ ಅವರ ಭದ್ರತೆಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಸೋರಿಕೆ ಮಾಡುತ್ತಿದ್ದ ಆರೋಪದ ಮೇಲೆ ಬಿಹಾರದ ಬಕ್ಸರ್ನಲ್ಲಿ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಈತನೆಗೆ ನೆರವಾಗುತ್ತಿದ್ದ ಇನ್ನಿಬ್ಬರನ್ನೂ ಸಹ ವಶಕ್ಕೆ ಪಡೆಯಲಾಗಿದೆ.
ಕಂದಾಯ ಗುಪ್ತಚರ ನಿರ್ದೇಶನಾಲಯ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಯರು ಅಕ್ರಮವಾಗಿ ಸಾಗಿಸುತ್ತಿದ್ದ ₹37 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
48 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಮೀರತ್ ನಲ್ಲಿ ನಡೆದಿದೆ.
ಪ್ರಮುಖ ವಿಮಾನಯಾನ ಸಂಸ್ಥೆಯಾದ ಏರ್ ಇಂಡಿಯಾ ತನ್ನ ಇಂಧನ ಹೆಚ್ಚುವರಿ ಶುಲ್ಕವನ್ನು ಪರಿಷ್ಕರಿಸಲು ನಿರ್ಧರಿಸಿದ್ದು, ಇದರಿಂದಾಗಿ ವಿಮಾನ ಟಿಕೆಟ್ ದರಗಳು ಏರಿಕೆಯಾಗಲಿವೆ.
ರಾಕೆಟ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿ, ಅವರ ತಾಯಿ ಗಾಯಗೊಂಡ ನಂತರ ಮಣಿಪುರ ಸರ್ಕಾರ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಿದೆ. ಈ ಘಟನೆಯು ಪ್ರಕ್ಷುಬ್ಧ ರಾಜ್ಯದಲ್ಲಿ ಹೊಸ ಪ್ರತಿಭಟನೆಗಳು ಮತ್ತು ಹಿಂಸಾಚಾರಕ್ಕೆ ಕಾರಣವಾಯಿತು.