Showing 20 of 2385 posts • Page 16 of 120
ಪಾಲಕ್ಕಾಡ್ನ ಕಲ್ಲಡಿಕೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ಅಪಘಾತವೊಂದು ಸಂಭವಿಸಿದೆ. ವೇಗವಾಗಿ ಬಂದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯೊಂದರ ಆವರಣಕ್ಕೆ ನುಗ್ಗಿದೆ.
ಸತ್ಯಮಂಗಲಂನಿಂದ ಕೊಯಮತ್ತೂರು ಮಾರ್ಗವಾಗಿ ಸಂಚರಿಸುವ ಹೆದ್ದಾರಿಯ ನೀಲಿಪಾಳ್ಯಂ ಬಳಿ ಮಾರ್ಚ್ 28ರಂದು ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ವಿಧಾನ ಪರಿಷತ್ (MLC) ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆಯ ಮಾನದಂಡಗಳನ್ನು ಪಾಲಿಸದ ಪಾನೀಯಗಳಿಗೆ ‘ORS’ ಎಂಬ ಹೆಸರನ್ನು ಬಳಸಬಾರದು ಎಂದು FSSAI ನೀಡಿದ್ದ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.
2026ರ ಕೇರಳ ವಿಧಾನಸಭಾ ಚುನಾವಣೆಯ ಕಹಳೆ ಮೊಳಗಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಪಾಲಕ್ಕಾಡ್ನಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದರು.
ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ದೇವಸ್ಥಾನಗಳಲ್ಲಿ ಕಳ್ಳತನ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.
ಗೋರಖ್ಪುರದ ಶಾಹಪುರ ಪೊಲೀಸ್ ಠಾಣಾ ವ್ಯಾಪ್ತಿಯ ಆವಾಸ್ ವಿಕಾಸ್ ಕಾಲೋನಿ ಸಮೀಪದ ಗೋಡ್ಧೋಯಿಯಾ ಸೇತುವೆಯ ಬಳಿಯಿದ್ದ ಹಜರತ್ ಬಾಬಾ ಜಾಫರ್ ಅಲಿ ಶಾ ‘ಮಾಸೂಮ್’ ಅವರ ಮಜಾರ್ ಅನ್ನು ಜಿಲ್ಲಾಡಳಿತವು ಬುಲ್ಡೋಜರ್ ಬಳಸಿ ತೆರವುಗೊಳಿಸಿದೆ.
ಯಮುನಾನಗರದಲ್ಲಿ ಸಿನಿಮೀಯ ಮಾದರಿಯ ಕಳ್ಳತನವೊಂದು ನಡೆದಿದೆ. ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ವಾಹನವೊಂದು ರಸ್ತೆಯಲ್ಲಿ ಚಲಿಸುತ್ತಿದ್ದಾಗಲೇ, ಬೈಕ್ನಲ್ಲಿ ಬಂದ ಕಳ್ಳನೊಬ್ಬ ಅತ್ಯಂತ ವೇಗವಾಗಿ ಮತ್ತು ಆತ್ಮವಿಶ್ವಾಸದಿಂದ ಸಿಲಿಂಡರ್ ಎಗರಿಸಿದ್ದಾನೆ.
ಇಂಡಿಗೋ ವಿಮಾನವು ಶನಿವಾರ ಬೆಳಿಗ್ಗೆ 161 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದಾಗ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು, ಇದರಿಂದಾಗಿ ಅಧಿಕಾರಿಗಳು ಪೂರ್ಣ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ.
ಪಾರ್ಸೆಲ್ ತಲುಪಿಸಲು ಚಲಿಸುವ ರೈಲಿನ ಪಕ್ಕದಲ್ಲಿ ತನ್ನ ಪ್ರಾಣವನ್ನೇ ಪಣಕ್ಕಿಟ್ಟ ವ್ಯಕ್ತಿ, ವೀಡಿಯೊ ವೈರಲ್!
ಜೈಪುರದಲ್ಲಿ ಸಣ್ಣ ಅಪಘಾತವೊಂದು ವಿಕೋಪಕ್ಕೆ ತಿರುಗಿದ್ದು, ಯುವತಿ ರಸ್ತೆಯಲ್ಲೇ ಬೈಕ್ ಸವಾರನ ವಾಹನವನ್ನು ಜಖಂಗೊಳಿಸಿರುವ ಘಟನೆ ನಡೆದಿದೆ.
ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಪೂರ್ಣಪ್ರಮಾಣದಲ್ಲಿ ಇನ್ನೂ ಬಗೆಹರಿಯದ ಹಿನ್ನೆಲೆ ಭಾರತ, ರಷ್ಯಾದಿಂದ ತೈಲ ಖರೀದಿಯನ್ನ ಮುಂದುವರಿಸಿದೆ.
ಭಾರತದ ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ಹಿಂದೆಂದೂ ಕಂಡಿರದ ಅತಿದೊಡ್ಡ ಐಪಿಒ (Initial Public Offering) ಗೆ ಮಣಿಪಾಲ್ ಹಾಸ್ಪಿಟಲ್ಸ್ ಸಜ್ಜಾಗಿದೆ. ಸಿಂಗಾಪುರದ ಹೂಡಿಕೆ ಸಂಸ್ಥೆ ಟೆಮಾಸೆಕ್ ಮತ್ತು ಡಾ. ರಂಜನ್ ಪೈ ಬೆಂಬಲಿತ ಮಣಿಪಾಲ್ ಹಾಸ್ಪಿಟಲ್ಸ್, ಬಿಲಿಯನ್ ಡಾಲರ್ಗೂ ಅಧಿಕ ಮೊತ್ತದ ಐಪಿಒಗಾಗಿ ಸೆಬಿಗೆ (Sebi) ಡ್ರಾಫ್ಟ್ ಪೇಪರ್ಗಳನ್ನು ಸಲ್ಲಿಸಿದೆ.
ನಕಲಿ ಬಿಡಿಎಸ್ ಪ್ರಮಾಣಪತ್ರ ಬಳಸಿ 20 ವರ್ಷಗಳ ಕಾಲ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದನು. ಅನುಮಾನ ಬರದಂತೆ ರಾತ್ರಿ ಮಾತ್ರ ಕ್ಲಿನಿಕ್ ಕಾರ್ಯಾಚರಣೆ ನಡೆಯುತ್ತಿತ್ತು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇರಳ ಪ್ರವಾಸ ರದ್ದುಗೊಳಿಸಿದ್ದಾರೆ.
ಸುಪ್ರೀಂಕೋರ್ಟ್ನಿಂದ ದಯಾಮರಣಕ್ಕೆ ಅನುಮತಿ ಪಡೆದಿದ್ದ ಉತ್ತರ ಪ್ರದೇಶದ ಹರೀಶ್ ರಾಣಾ 13 ವರ್ಷಗಳ ನರಳಾಟದ ಬಳಿಕ ಕೊನೆಯುಸಿರೆಳೆದಿದ್ದಾರೆ.
ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ಹಾಗೂ ಯುವ ವಿಭಾಗದ ವತಿಯಿಂದ ಮಾ. 22 ರಂದು ಬಂಟರ ಸಂಘ ಮುಂಬಯಿಯ ಬಂಟ್ಸ್ ಹೆಲ್ತ್ ಕೇರ್ ಸಮಿತಿ ಹಾಗೂ ಬಂಟ್ಸ್ ಡಾಕ್ಸರ್ಸ್ ಎಸೋಶಿಯೇಶನ್, ಮುಂಬಯಿಯ ಸಹಭಾಗಿತ್ವದಲ್ಲಿ ‘ಉಚಿತ ನೇತ್ರ ಪರೀಕ್ಷೆ , ಕನ್ನಡಕ ವಿತರಣೆ ಹಾಗೂ ರಕ್ತದಾನ ಶಿಬಿರ’ ವನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಕಾಂದಿವಲಿ ಪಶ್ಚಿಮದ ಕಮಲಾ ವಿಹಾರ್ ಸ್ಪೋರ್ಟ್ಸ್ ಕ್ಲಬ್, ಪೊಯಿಸರ್ ಜಿಮ್ಖಾನ ರೋಡ್, ಮಹಾವೀರ ನಗರ, ಮುಂಬಯಿ ಇಲ್ಲಿ ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಹಣಕಾಸು ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಹಣಕಾಸು ಶಿಸ್ತು, ತೆರಿಗೆ ಸುಧಾರಣೆ, ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ ತತ್ವ ಹಾಗೂ ಮಾಜಿ ಸೈನಿಕರ ಕಲ್ಯಾಣ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸದನದ ಗಮನಸೆಳೆದರು.
ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿ ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನಕ್ಕೆ ಅರ್ಹನಾಗಿರುವುದಿಲ್ಲ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಗಳು ಮಾತ್ರ ಎಸ್ಸಿ ಸ್ಥಾನಮಾನವನ್ನು ಪಡೆಯುವ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.
ಭಾರತವು 41 ರಾಷ್ಟ್ರಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದೆ ಮತ್ತು 53 ಲಕ್ಷ ಮೆಟ್ರಿಕ್ ಟನ್ ಇಂಧನ ನಿಕ್ಷೇಪಗಳು ಜಾರಿಯಲ್ಲಿವೆ.