Showing 20 of 2385 posts • Page 23 of 120
ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 6ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಭಾರತ-ಯುರೋಪ್ ಒಕ್ಕೂಟವು ಮುಕ್ತ ವ್ಯಾಪಾರ ಒಪ್ಪಂದಕ್ಕೆ ಮಂಗಳವಾರ ಅಧಿಕೃತವಾಗಿ ಸಹಿ ಹಾಕಿವೆ.
ಕಾಶ್ಮೀರದಲ್ಲಿನ ಹಿಮಪಾತದಿಂದಾಗಿ ಶ್ರೀನಗರಕ್ಕೆ ಆಗಮಿಸಬೇಕಿದ್ದ ಸುಮಾರು 50 ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೇಂದ್ರ ಸರ್ಕಾರವು 2026 ರ ಪದ್ಮ ಪ್ರಶಸ್ತಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಜಾರ್ಖಂಡ್ನ ಸಾರಂಡಾ ಕಾಡಿನಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಗೆ ಐವರು ಮಹಿಳೆಯರು ಸೇರಿದಂತೆ 17 ಮಂದಿ ನಕ್ಸಲರು ಬಲಿಯಾಗಿದ್ದಾರೆ.
ಈ ಬಾರಿ ಜನವರಿ 26 ರಂದು ನಡೆಯಲಿರುವ 77 ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಒಡಿಶಾದ ಕೊರಾಪುಟ್ ಜಿಲ್ಲೆಯಲ್ಲಿ ಮಾಂಸಾಹಾರಿ ಆಹಾರ ಪದಾರ್ಥಗಳ ಮಾರಾಟವನ್ನು ನಿಷೇಧಿಸಲಾಗಿದೆ. ಈ ಸಂಬಂಧ ಕೊರಾಪುಟ್ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
ಪುಣೆಯ ಅಪಾರ್ಟ್ಮೆಂಟ್ ಆವರಣದಲ್ಲಿ ಸೈಕಲ್ ಸವಾರಿ ಮಾಡುತ್ತಿದ್ದ ಐದು ವರ್ಷದ ಬಾಲಕನ ಮೇಲೆ ಕಾರು ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಲೋನಿ ಕಲ್ಭೋರ್ ಪ್ರದೇಶದಲ್ಲಿ ನಡೆದಿದೆ.
ಒಡಿಶಾದಿಂದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರಕ್ಕೆ 286 ಕೆಜಿ ತೂಕದ ಭಾರೀ ಸ್ವರ್ಣ ಧನಸ್ಸು ಆಗಮಿಸಿದೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಅಪರೂಪದ ಧನಸ್ಸು ಭಕ್ತರಲ್ಲಿ ಅಪಾರ ಭಕ್ತಿ ಮೂಡಿಸಿದೆ.
ಒಡಿಶಾ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ.
ಇಲ್ಲಿನ ಉಕ್ಕು ಕಾರ್ಖಾನೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಸ್ಪೋಟದಲ್ಲಿ ಕನಿಷ್ಠ 7 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.
ಸೇನಾ ವಾಹನವೊಂದು ಕಂದಕಕ್ಕೆ ಉರುಳಿ ಬಿದ್ದಿರುವ ಘಟನೆ ಜಮ್ಮು ಕಾಶ್ಮಿರದಲ್ಲಿ ನಡೆದಿದೆ. ಭೀಕರ ಅಪಘಾತದಲ್ಲಿ 10 ಸೈನಿಕರು ಹುತಾತ್ಮರಾಗಿದ್ದು, ಒಂಬತ್ತು ಮಂದಿ ಗಾಯಗೊಂಡಿದ್ದಾರೆ.
77ನೇ ಗಣರಾಜೋತ್ಸವ ದಿನಾಚರಣೆ ಹಿನ್ನಲೆ ಜನವರಿ 26 ರಂದು ಕರ್ತವ್ಯ ಪಥದಲ್ಲಿ ನಡೆಯಲಿರುವ ಪರೇಡ್ಗೂ ಮುನ್ನ ದೆಹಲಿ ಪೊಲೀಸರು ಸುರಕ್ಷತಾ ಕ್ರಮಗಳನ್ನ ಹೆಚ್ಚಿಸಿದ್ದಾರೆ.
ಬಸ್ಸಿನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿಡಿಯೋ ವೈರಲ್ ಆದ ಬಳಿಕ, ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಡಿಯೋ ಹಂಚಿಕೊಂಡಿದ್ದ ಮಹಿಳೆಯನ್ನು ಬುಧವಾರ ಕೇರಳದ ಕೋಝಿಕ್ಕೋಡ್ನಲ್ಲಿ ಪೊಲೀಸರು ಬಂಧಿಸಿದ್ದಾರೆ.
ನಗರದ ಹೊರವಲಯದ ಟಿಬಿ ಡ್ಯಾಂ ಚೆಕ್ ಪೋಸ್ಟ್ನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಮಂಗಳವಾರ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಮರಳು, ಮಣ್ಣು (ಗ್ರಾವೆಲ್) ಹಾಗೂ ಬಿಳಿ ಕಲ್ಲುಗಳನ್ನು ಸಾಗಿಸುತ್ತಿದ್ದ 7 ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ.
ಇಲ್ಲಿನ ಪ್ರಯಾಗ್ರಾಜ್ನಲ್ಲಿ ಭಾರತೀಯ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದ್ದು, ಇಬ್ಬರು ಪೈಲಟ್ನ್ನು ರಕ್ಷಣೆ ಮಾಡಲಾಗಿದೆ.
ಹಳ್ಳಿಯೊಂದರ ಘಟನೆಯಲ್ಲಿ ಪಾದ್ರಿಯೊಬ್ಬರು ತೀವ್ರ ದೈಹಿಕ ಮತ್ತು ಮಾನಸಿಕ ಕಿರುಕುಳಕ್ಕೆ ಒಳಗಾಗಿದ್ದಾರೆ ಎಂದು ಅವರ ಪತ್ನಿ ಹೇಳಿಕೊಂಡ ನಂತರ, ಒಡಿಶಾದಿಂದ ಬಂದಿರುವ ಆತಂಕಕಾರಿ ಆರೋಪವು ಆಕ್ರೋಶಕ್ಕೆ ಕಾರಣವಾಗಿದೆ ಮತ್ತು ಧಾರ್ಮಿಕ ಅಸಹಿಷ್ಣುತೆಯ ಬಗ್ಗೆ ಮತ್ತೆ ಕಳವಳವನ್ನುಂಟುಮಾಡಿದೆ.
ಕೇರಳದ ಕೋಝಿಕ್ಕೋಡ್ನ ಪೊಲೀಸರು 35 ವರ್ಷದ ‘Content creator’ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) ಅಡಿಯಲ್ಲಿ ಸೆಕ್ಷನ್ 108 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಕಣಿಪುರ ಶ್ರೀಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ಶನಿವಾರ ರಾತ್ರಿ ನಡೆದ ಬೆಡಿ ಮಹೋತ್ಸವದ ಹಿನ್ನೆಲೆಯಲ್ಲಿ ಬೆಡಿ ಉತ್ಸವ ಸಮಿತಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ.
ಸೋಮವಾರ ವಾಯುವ್ಯ ಕಾಶ್ಮೀರದ ಲಡಾಖ್ ಪ್ರದೇಶದಲ್ಲಿ 5.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ತೆಲಂಗಾಣದಲ್ಲಿ ಬೀದಿನಾಯಿಗಳ ಸಾಮೂಹಿಕ ಹತ್ಯೆಯ ಆರೋಪಗಳು ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಚುನಾವಣೆಯ ಸಮಯದಲ್ಲಿ ನೀಡಿದ್ದ ಭರವಸೆಯಂತೆ ಕಳೆದ ಒಂದು ವಾರದಲ್ಲಿ 500 ನಾಯಿಗಳಿಗೆ ವಿಷಪ್ರಾಶನ ಮಾಡಿ ಕೊಲ್ಲಲಾಗಿದೆ ಎಂದು ಆರೋಪಿಸಲಾಗಿದೆ.