Showing 20 of 2215 posts • Page 37 of 111
ಈಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಮಗಳು ಮದುವೆಯಾಗಿ ಜೀವನದಲ್ಲಿ ಉತ್ತಮವಾಗಿ ನೆಲೆಸಿದ್ದಾಳೆ ಎಂದು ಖಚಿತಪಡಿಸಿಕೊಳ್ಳುವಾಗ ಮಹಿಳೆಯರನ್ನು ತಲೆ ತಗ್ಗಿಸಿ ಸನ್ಯಾಸಿಗಳಂತೆ ಬದುಕಲು ಏಕೆ ಪ್ರೋತ್ಸಾಹಿಸುತ್ತಾರೆ ಎಂದು ಮದ್ರಾಸ್ ಹೈಕೋರ್ಟ್ನ ನ್ಯಾಯಾಧೀಶರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಆಕಸ್ಮಿಕ ಹಿಂದೂಗಳಿಂದ ದೇಶಕ್ಕೆ ನಿಷ್ಠೆ ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆಸಿಆರ್ ಪುತ್ರಿ ಹಾಗೂ ಹಿರಿಯ ಬಿಆರ್ ಎಸ್ ನಾಯಕಿ ಕೆ.ಕವಿತಾ ಅವರಿಗೆ ಅನಾರೋಗ್ಯ ಕಾಡಿದ್ದು, ಹೈದರಾಬಾದ್ನ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪೋಷಕರು ಕೊಳಲು ನುಡಿಸುವ ಶಾಲೆಗೆ ಸೇರಿಸದಿದ್ದಕ್ಕೆ ಮನನೊಂದು SSLC ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿಯಲ್ಲಿ ನಡೆದಿದೆ.
ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲಿಯೇ ಮರೆತು ಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆಯ 3ನೇ ಮತ್ತು ಅಂತಿಮ ಹಂತದ ಮತದಾನ ಈಗ ಆರಂಭವಾಗಿದೆ. ಜಮ್ಮು ಮತ್ತು ಕಾಶ್ಮೀರದ ಏಳು ಜಿಲ್ಲೆಗಳಲ್ಲಿ ವೋಟಿಂಗ್ ನಡೆಯಲಿದೆ. 39.18 ಲಕ್ಷ ಮತದಾರರು 415 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಕೆಲಸದ ಒತ್ತಡ ತಾಳಲಾರದೇ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ತರುಣ್ (42) ಸಾವಿಗೆ ಶರಣಾದ ಉದ್ಯೋಗಿ. ಬಜಾಜ್ ಫೈನಾನ್ಸ್ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ತಮ್ಮ ಕೆಲಸ ಕಳೆದುಕೊಳ್ಳುವ ಬಗ್ಗೆ ತೀವ್ರ ಆತಂಕಕ್ಕೊಳಗಾಗಿದ್ದು ಈ ಪತ್ರದಲ್ಲಿ ವ್ಯಕ್ತವಾಗಿದೆ.
ಪ್ರಾಕೃತಿಕ ವಿಕೋಪ, ವರುಣಾರ್ಭಟದಿಂದ ಪ್ರವಾಹ, ಭೂಕುಸಿತ ನೇಪಾಳವನ್ನು ನಲುಗುವಂತೆ ಮಾಡಿದೆ.
ಬ್ಯಾಟರಿ ಸ್ಲಾಟ್ನಲ್ಲಿ ಚಿನ್ನ ಸಾಗಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ಅರವಿಂದ್ ಕೇಜ್ರಿವಾಲ್ ಮತ್ತು ದೆಹಲಿ ಮುಖ್ಯಮಂತ್ರಿ ಅತಿಶಿ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಗೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರು ವಾಯುಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಇಂದು ಹಸುವನ್ನು ‘ರಾಜ್ಯ ಮಾತೆ’ ಎಂದು ಘೋಷಿಸಿದೆ. ಭಾರತೀಯ ಸಂಪ್ರದಾಯದಲ್ಲಿ ಗೋವುಗಳ ಸಾಂಸ್ಕೃತಿಕ ಪ್ರಾಮುಖ್ಯತೆಯನ್ನು ಉಲ್ಲೇಖಿಸಿ ಸರ್ಕಾರ ಈ ಕ್ರಮ ಕೈಗೊಂಡಿದೆ.
ನೂತನ 500 ರೂ. ಮುಖಬೆಲೆಯ ನೋಟು ಚಲಾವಣೆಗೆ ಬಂದು ಎಂಟು ವರ್ಷಗಳಾಗುತ್ತ ಬಂದಿದೆ. ಹೊಸ ನೋಟುಗಳು ಚಲಾವಣೆಗೆ ಬರುತ್ತಿದ್ದಂತೆಯೇ ನಕಲಿ ನೋಟುಗಳ ಹಾವಳಿಗೆ ಕಡಿವಾಣ ಬಿದ್ದಿತ್ತು.
ಸಮಾಜದ ವಿವಿಧ ವಿಷಯಗಳ ಬಗ್ಗೆ ಜನರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳಲು ಮತ್ತು ಜನರಿಂದ ಅಭಿಪ್ರಾಯ ಸಂಗ್ರಹಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ್ದ ಮಾಸಿಕ ರೇಡಿಯೋ
ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿಗೆ ಸೇರಿದ ನಾಯಕರನ್ನು ಬಿಜೆಪಿ ಶಾಸಕ ಬಾಲಮುಕುಂದ ಆಚಾರ್ಯ ಗಂಗಾಜಲ ಮತ್ತು ಗೋಮೂತ್ರವನ್ನು ಸಿಂಪಡಿಸಿ ಶುದ್ಧೀಕರಣ ಮಾಡಿದ ಘಟನೆ ಜೈಪುರದಲ್ಲಿ ನಡೆದಿದೆ.
ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಗಟ್ಟಿಗೊಳಿಸಲು ಜಮೈಕಾದ ಪ್ರಧಾನಿ ಆ್ಯಂಡ್ರ್ಯೂ ಹೋಲ್ನೆಸ್ ಸೋಮವಾರದಿಂದ ನಾಲ್ಕು ದಿನಗಳ ಕಾಲ ಭಾರತಕ್ಕೆ ಭೇಟಿ ನೀಡಲಿದ್ದಾರೆ.
ಏಳನೇ ತರಗತಿಯ ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ತೆಲಂಗಾಣದ ಸಿದ್ದಿಪೇಟ್ ಜಿಲ್ಲೆಯಲ್ಲಿ ನಡೆದಿದೆ.
ಕಥುವಾದ ಮಂಡ್ಲಿಯಲ್ಲಿ ಸೇನಾ ಕಾರ್ಯಾಚರಣೆ ಮುಂದುವರಿದಿದೆ. 2ನೇ ದಿನದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಉಗ್ರರನೊಬ್ಬನ್ನ ಗುಂಡಿಕ್ಕಿ ಕೊಂಡಿದೆ.
ಗುಜರಾತ್, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜೀನಾಮೆ ಕೊಡಬೇಕು ಎಂದು ಚುನಾವಣಾ ಬಾಂಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಆಗ್ರಹಿಸಿದ್ದಾರೆ.