Showing 20 of 2215 posts • Page 8 of 111
ಜೈಪುರದಲ್ಲಿ ಸಣ್ಣ ಅಪಘಾತವೊಂದು ವಿಕೋಪಕ್ಕೆ ತಿರುಗಿದ್ದು, ಯುವತಿ ರಸ್ತೆಯಲ್ಲೇ ಬೈಕ್ ಸವಾರನ ವಾಹನವನ್ನು ಜಖಂಗೊಳಿಸಿರುವ ಘಟನೆ ನಡೆದಿದೆ.
ಹಾರ್ಮುಜ್ ಜಲಸಂಧಿಯ ಬಿಕ್ಕಟ್ಟು ಪೂರ್ಣಪ್ರಮಾಣದಲ್ಲಿ ಇನ್ನೂ ಬಗೆಹರಿಯದ ಹಿನ್ನೆಲೆ ಭಾರತ, ರಷ್ಯಾದಿಂದ ತೈಲ ಖರೀದಿಯನ್ನ ಮುಂದುವರಿಸಿದೆ.
ಭಾರತದ ಆರೋಗ್ಯ ರಕ್ಷಣಾ ಕ್ಷೇತ್ರದಲ್ಲಿ ಹಿಂದೆಂದೂ ಕಂಡಿರದ ಅತಿದೊಡ್ಡ ಐಪಿಒ (Initial Public Offering) ಗೆ ಮಣಿಪಾಲ್ ಹಾಸ್ಪಿಟಲ್ಸ್ ಸಜ್ಜಾಗಿದೆ. ಸಿಂಗಾಪುರದ ಹೂಡಿಕೆ ಸಂಸ್ಥೆ ಟೆಮಾಸೆಕ್ ಮತ್ತು ಡಾ. ರಂಜನ್ ಪೈ ಬೆಂಬಲಿತ ಮಣಿಪಾಲ್ ಹಾಸ್ಪಿಟಲ್ಸ್, ಬಿಲಿಯನ್ ಡಾಲರ್ಗೂ ಅಧಿಕ ಮೊತ್ತದ ಐಪಿಒಗಾಗಿ ಸೆಬಿಗೆ (Sebi) ಡ್ರಾಫ್ಟ್ ಪೇಪರ್ಗಳನ್ನು ಸಲ್ಲಿಸಿದೆ.
ನಕಲಿ ಬಿಡಿಎಸ್ ಪ್ರಮಾಣಪತ್ರ ಬಳಸಿ 20 ವರ್ಷಗಳ ಕಾಲ ಅಕ್ರಮ ಕ್ಲಿನಿಕ್ ನಡೆಸುತ್ತಿದ್ದನು. ಅನುಮಾನ ಬರದಂತೆ ರಾತ್ರಿ ಮಾತ್ರ ಕ್ಲಿನಿಕ್ ಕಾರ್ಯಾಚರಣೆ ನಡೆಯುತ್ತಿತ್ತು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೇರಳ ಪ್ರವಾಸ ರದ್ದುಗೊಳಿಸಿದ್ದಾರೆ.
ಸುಪ್ರೀಂಕೋರ್ಟ್ನಿಂದ ದಯಾಮರಣಕ್ಕೆ ಅನುಮತಿ ಪಡೆದಿದ್ದ ಉತ್ತರ ಪ್ರದೇಶದ ಹರೀಶ್ ರಾಣಾ 13 ವರ್ಷಗಳ ನರಳಾಟದ ಬಳಿಕ ಕೊನೆಯುಸಿರೆಳೆದಿದ್ದಾರೆ.
ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ ಹಾಗೂ ಯುವ ವಿಭಾಗದ ವತಿಯಿಂದ ಮಾ. 22 ರಂದು ಬಂಟರ ಸಂಘ ಮುಂಬಯಿಯ ಬಂಟ್ಸ್ ಹೆಲ್ತ್ ಕೇರ್ ಸಮಿತಿ ಹಾಗೂ ಬಂಟ್ಸ್ ಡಾಕ್ಸರ್ಸ್ ಎಸೋಶಿಯೇಶನ್, ಮುಂಬಯಿಯ ಸಹಭಾಗಿತ್ವದಲ್ಲಿ ‘ಉಚಿತ ನೇತ್ರ ಪರೀಕ್ಷೆ , ಕನ್ನಡಕ ವಿತರಣೆ ಹಾಗೂ ರಕ್ತದಾನ ಶಿಬಿರ’ ವನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರ ನೇತೃತ್ವದಲ್ಲಿ ಕಾಂದಿವಲಿ ಪಶ್ಚಿಮದ ಕಮಲಾ ವಿಹಾರ್ ಸ್ಪೋರ್ಟ್ಸ್ ಕ್ಲಬ್, ಪೊಯಿಸರ್ ಜಿಮ್ಖಾನ ರೋಡ್, ಮಹಾವೀರ ನಗರ, ಮುಂಬಯಿ ಇಲ್ಲಿ ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಹಣಕಾಸು ವಿಧೇಯಕದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿ, ಹಣಕಾಸು ಶಿಸ್ತು, ತೆರಿಗೆ ಸುಧಾರಣೆ, ರಾಷ್ಟ್ರೀಯ ಭದ್ರತೆ, ಸಹಕಾರಿ ಒಕ್ಕೂಟ ತತ್ವ ಹಾಗೂ ಮಾಜಿ ಸೈನಿಕರ ಕಲ್ಯಾಣ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸದನದ ಗಮನಸೆಳೆದರು.
ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿ ಪರಿಶಿಷ್ಟ ಜಾತಿ (ಎಸ್ಸಿ) ಸ್ಥಾನಮಾನಕ್ಕೆ ಅರ್ಹನಾಗಿರುವುದಿಲ್ಲ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಪಡೆಯುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಪ್ರತಿಪಾದಿಸುವ ವ್ಯಕ್ತಿಗಳು ಮಾತ್ರ ಎಸ್ಸಿ ಸ್ಥಾನಮಾನವನ್ನು ಪಡೆಯುವ ಹಕ್ಕನ್ನು ಹೊಂದಿದ್ದಾರೆ ಎಂದು ನ್ಯಾಯಾಲಯವು ತೀರ್ಪು ನೀಡಿದೆ.
ಭಾರತವು 41 ರಾಷ್ಟ್ರಗಳಿಂದ ಇಂಧನವನ್ನು ಆಮದು ಮಾಡಿಕೊಳ್ಳುತ್ತಿದೆ ಮತ್ತು 53 ಲಕ್ಷ ಮೆಟ್ರಿಕ್ ಟನ್ ಇಂಧನ ನಿಕ್ಷೇಪಗಳು ಜಾರಿಯಲ್ಲಿವೆ.
ಹಾರ್ಮುಜ್ ಜಲಸಂಧಿ ಬಿಕ್ಕಟ್ಟು ಆಮದುಗಳ ಮೇಲೆ ಪರಿಣಾಮ ಬೀರಿರುವುದರಿಂದ ಭಾರತ 10 ಕೆಜಿ ಎಲ್ಪಿಜಿ ಪೂರೈಕೆ ಯೋಜನೆ ಜಾರಿಗೆ ಮುಂದಾಗಿದೆ.
ಗುಜರಾತ್ ನೋಂದಣಿಯ ಟೊಯೋಟಾ ಫಾರ್ಚೂನರ್ ಕಾರು ವಾಗೇಟರ್ ಬೀಚ್ನಲ್ಲಿ ಚಾಲನೆ ಮಾಡುತ್ತಿದ್ದಾಗ, ಏರುತ್ತಿರುವ ಅಲೆಗಳು ವಾಹನವನ್ನು ಭಾಗಶಃ ಹೊಡೆದುರುಳಿಸಿದವು.
ಭುವನೇಶ್ವರದಿಂದ ನಬರಂಗ್ಪುರಕ್ಕೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ನ ಹಿಂಭಾಗದ ಟೈರ್ ಸ್ಫೋಟಗೊಂಡ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಯಾಗಿದೆ.
ಬದ್ಲಾಪುರದಿಂದ ಸಿಯಾನ್ ಆಸ್ಪತ್ರೆಗೆ ಪ್ರಯಾಣಿಸುತ್ತಿದ್ದಾಗ, ಒಂದು ಕುಟುಂಬದ ಆಂಬ್ಯುಲೆನ್ಸ್ ಮುಂಬೈನ ಬೆಳಗಿನ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿತು, ಅಪರಿಚಿತ ಬೈಕ್ ಸವಾರನೊಬ್ಬ ಬಂದು ದಾರಿ ತೆರವುಗೊಳಿಸಿ ಮಾನವೀಯತೆ ಮೆರೆದಿದ್ದಾನೆ.
ಸಾಫ್ಟ್ ಡ್ರಿಂಕ್ಸ್ (ತಂಪು ಪಾನೀಯ) ತುಂಬಿದ್ದ ಲಾರಿಯೊಂದು ಅಪಘಾತಕ್ಕೀಡಾದಾಗ, ಅಲ್ಲಿ ನೆರೆದಿದ್ದ ಜನತೆ ಎಂತಹ ಕೀಳು ಮಟ್ಟದ ವರ್ತನೆ ತೋರಿದ್ದಾರೆ ಎಂದರೆ ಅದನ್ನು ವಿವರಿಸಲು ಪದಗಳಿಲ್ಲ.
ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷ ಭಾರತದ ಮೇಲೂ ಪರಿಣಾಮ ಬೀರಿದೆ. ಕಚ್ಚಾತೈಲ, ಗ್ಯಾಸ್ ಸಮಸ್ಯೆ ಬಳಿಕ ಷೇರುಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಠಿಯಾಗುತ್ತಿದ್ದು, ರೂಪಾಯಿ ಮೌಲ್ಯವೂ ಕುಸಿಯುತ್ತಿದೆ. ಈ ನಡುವೆ ಬ್ಲ್ಯಾಕ್ ಮಾರ್ಕೆಟ್ ಮೇಲೆ ನಿಗಾ ವಹಿಸಲು ಸರ್ಕಾರ ಅಗತ್ಯ ಸರಕುಗಳ ಕಾಯ್ದೆಯ ಸೆಕ್ಷನ್ 3 ಜಾರಿ ಮಾಡಿದೆ.
ಕುಕಟ್ಪಲ್ಲಿಯ ಪ್ರತಿಷ್ಠಿತ ಚಿನ್ನದ ಮಳಿಗೆಗಳಲ್ಲಿ ಅಸಲಿ ಚಿನ್ನದ ಉಂಗುರಗಳನ್ನು ಬದಲಾಯಿಸಿ, ಅವುಗಳ ಜಾಗದಲ್ಲಿ ನಕಲಿ (Imitation) ಉಂಗುರಗಳನ್ನು ಇಟ್ಟು ಕಳವು ಮಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
ಹಣಕ್ಕಾಗಿ ಎಟಿಎಂ ಬಳಸುವ ಕಾಲ ಹೋಗಿ, ಈಗ ಗ್ಯಾಸ್ ಸಿಲಿಂಡರ್ಗಳಿಗೂ ಎಟಿಎಂ ಬಂದಿದೆ. ಭಾರತ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ತನ್ನ ‘ಭಾರತ ಗ್ಯಾಸ್’ ಗ್ರಾಹಕರಿಗಾಗಿ ದೇಶದ ಮೊದಲ ಎಲ್ಪಿಜಿ ಎಟಿಎಂ ಅನ್ನು ಲೋಕಾರ್ಪಣೆ ಮಾಡಿದೆ.
ಚಂಡೀಗಢದ ಪ್ರತಿಷ್ಠಿತ ಸೆಕ್ಟರ್-9ರಲ್ಲಿ ಗುರುವಾರ ಹಾಡಹಗಲೇ ಗುಂಡಿನ ಸದ್ದು ಕೇಳಿಬಂದಿದೆ.
ಇಂದು ಬೆಳಿಗ್ಗೆ ಮಹಾರಾಷ್ಟ್ರದ ವಾಕೋದ್ ಚೌಫುಲಿ ಬಳಿ ಸಂಭವಿಸಿದ ಅಪಘಾತದಲ್ಲಿ ದೊಡ್ಡ ಮಟ್ಟದ ಅನಾಹುತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ.