ಉಡುಪಿ: ವಿಶ್ವ ಅಂಗಾಂಗ ದಾನದ ದಿನದಂದು ಅಂಗಾಂಗ ದಾನ ಮಾಡುವ ಸಂಕಲ್ಪ ಮಾಡೋಣ, ನಾನು ಕೂಡಾ ಅಂಗಾಂಗ ದಾನಕ್ಕೆ ಸಹಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
‘ಹೃದಯ, ಯಕೃತ್ತು, ಮೂತ್ರಪಿಂಡ ಸೇರಿದಂತೆ ದೇಹದ ವಿವಿಧ ಅಂಗಾಂಗಗಳನ್ನು ಯಶಸ್ವಿಯಾಗಿ ಕಸಿ ಮಾಡಲಾಗುತ್ತಿದೆ. ಮರಣಾ ನಂತರ ದೇಹವನ್ನು ಮಣ್ಣಾಗಿಸದೆ, ಅಂಗಾಂಗ ದಾನದ ಮೂಲಕ ಮತ್ತೊಬ್ಬರ ಬಾಳಿಗೆ ಬೆಳಕಾಗೋಣ’ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತು ತಜ್ಞರ ಸಮಿತಿಯ ವರದಿ ಆಧರಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.