ಕಾಸರಗೋಡು: ಸೋಡಾ ತಯಾರಿಕಾ ಘಟಕದಲ್ಲಿ ಅಕ್ರಮವಾಗಿ ದಾಸ್ತಾನಿರಿಸಲಾಗಿದ್ದ 22 ಬಾಟ್ಲಿ ಮದ್ಯವನ್ನು ವಶಪಡಿಸಿಕೊಂಡಿರುವ ಅಬಕಾರಿ ದಳದವರು ಓರ್ವನನ್ನು ಬಂಧಿಸಿದ್ದಾರೆ.
ಕುಂಬಳೆ ದೇವಸ್ಥಾನ ರಸ್ತೆಯ ಕೆ. ರಮೇಶ್ (47) ಬಂಧಿತ ಆರೋಪಿಯಾಗಿದ್ದು, 28 ಬಾಟ್ಲಿ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಬಕಾರಿ ದಳಕ್ಕೆ ಲಭಿಸಿದ ಖಚಿತ ಮಾಹಿತಿಯಂತೆ ದಾಳಿ ನಡೆಸಲಾಗಿದೆ.
ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ.