ಬೆಂಗಳೂರು: ಸರ್ಕಾರಿ ಉದ್ಯೋಗಿಗಳು ತಮ್ಮ ನಿರ್ಲಕ್ಷ್ಯ ಧೋರಣೆ, ದರ್ಪದ ವರ್ತನೆ ಬಿಟ್ಟು ಎಲ್ಲರೂ ಕಟ್ಟುನಿಟ್ಟಾಗಿ ಕೆಲಸ ಮಾಡಲೇಬೇಕು ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ಸರ್ಕಾರಿ ಇಲಾಖೆಗಳ ಸಿಬ್ಬಂದಿಗೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಇಲಾಖೆಯ ಅಧಿಕಾರಿಗಳೂ ಆಯಾ ಇಲಾಖೆಗಳಿಗೆ ಸಂಬಂಧಿಸಿದ ಫೈಲ್ಗಳನ್ನು ಕಳುಹಿಸುತ್ತಾರೆ. ಮುಂದಿನ 15 ದಿನಗಳೊಳಗೆ ಆ ಎಲ್ಲ ಫೈಲ್ಗಳೂ ವಿಲೇವಾರಿ ಆಗಬೇಕೆಂದು ಆದೇಶಿಸಿದ್ದೇನೆ. ಎಲ್ಲ ಇಲಾಖೆಗಳಲ್ಲೂ ಅನಗತ್ಯ ಖರ್ಚು ಕಡಿಮೆ ಮಾಡಬೇಕೆಂದು ಸೂಚಿಸಿದ್ದೇನೆ. ಕನಿಷ್ಠ ಶೇ.5ರಷ್ಟು ಅನಗತ್ಯ ಖರ್ಚು ಕಡಿಮೆ ಮಾಡಬೇಕು ಎಂದು ಇಂದಿನ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಆರ್ಥಿಕ ಶಿಸ್ತು ನನ್ನ ಪ್ರಥಮ ಆದ್ಯತೆ. ಅಧಿಕಾರಿಗಳ ಕ್ಷಮತೆಗೆ ಅನುಗುಣವಾಗಿ ಜವಾಬ್ದಾರಿಗಳನ್ನು ನೀಡುತ್ತೇನೆ. ಈಗ ನನ್ನ ಮುಂದೆ ಸಾಕಷ್ಟು ಸವಾಲುಗಳಿವೆ. ಸವಾಲುಗಳನ್ನೇ ಮೆಟ್ಟಿಲು ಮಾಡಿಕೊಂಡು ಉತ್ತಮ, ಜನಪರ ಆಡಳಿತ ನೀಡುವುದು ನನ್ನ ಗುರಿ ಎಂದಿದ್ದಾರೆ.
ಅಧಿಕಾರಶಾಹಿ ವರ್ತನೆ ಇನ್ನು ನಡೆಯಲ್ಲ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.