ಧಾರವಾಡ: ಎದುರಿಗೆ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಬಸ್ ಒಂದು ರಸ್ತೆ ಪಕ್ಕದ ಗುಂಡಿಗೆ ಉರುಳಿದ ಘಟನೆ ಜಿಲ್ಲೆಯ ಹೊರವಲಯದ ಧಾರವಾಡ ಸಮೀಪದ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಶನಿವಾರ ನಡೆದಿದೆ.
ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದ ಕೆಎ 27 ಎಫ್ 658 KSRTC ಬಸ್ ಹಳಿಯಾಳ ಸಮೀಪದಲ್ಲಿ ಬಂದಾಗ ಈ ಅವಘಡ ಸಂಭವಿಸಿದೆ. ಯಾರ ಪ್ರಾಣಕ್ಕೂ ಅಪಾಯ ಆಗಿಲ್ಲ. ಚಾಲಕ ಸೇರಿದಂತೆ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ದಾರವಾಡದ ಸಂಚಾರಿ ಪೊಲೀಸ್ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.