News Karnataka Kannada
Saturday, May 18 2024
ಕರ್ನಾಟಕ

ಅಪರೂಪದ ಪ್ರಾಣಿಗಳ ಬೇಟೆಯಾಡುತ್ತಿದ್ದ ಆರು ಮಂದಿ ಸೆರೆ

Photo Credit :

ಅಪರೂಪದ ಪ್ರಾಣಿಗಳ ಬೇಟೆಯಾಡುತ್ತಿದ್ದ ಆರು ಮಂದಿ ಸೆರೆ

ಸೋಮವಾರಪೇಟೆ: ಪುಷ್ಪಗಿರಿ ವನ್ಯಧಾಮದಲ್ಲಿ ಕಡವೆ ಹಾಗು ಇತರ ಅಪರೂಪದ ಪ್ರಾಣಿಗಳನ್ನು ಬೇಟೆಯಾಡಿದ್ದ 6 ಮಂದಿ ಆರೋಪಿಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಅರಣ್ಯದಲ್ಲೇ ಬಂಧಿಸಿದ್ದಾರೆ.

ತಾಲೂಕಿನ ಕುಂಬಾರಗಡಿಗೆ, ಗ್ರಾಮದ ಟಿ.ಪಿ.ಮುದ್ದಯ್ಯ, ಸೋಮಯ್ಯ, ಗಣೇಶ, ಲೋಕೇಶ್, ಮುಟ್ಲು ಗ್ರಾಮದ ವಿ.ಕೆ. ಮನು, ಕಾಶಿ ಬಂಧಿತ ಆರೋಪಿಗಳು. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ. ಆರೋಪಿಗಳಿಂದ ಕಡವೆ, ಮುಳ್ಳುಹಂದಿ, ಮಂಗ ಸೇರಿದಂತೆ 40 ಕೆ.ಜಿ.ಮಾಂಸ, ಒಂಟಿ ನಳಿಕೆಯ 3 ಕೋವಿಗಳು, 6 ಮೊಬೈಲ್ ಪೋನ್ ಗಳು, 9 ಕತ್ತಿಗಳನ್ನು ವಶಪಡಿಸಿಕೊಂಡಿದ್ದಾರೆ.

ವನ್ಯಧಾಮದ ಭಕ್ತಿಬೆಟ್ಟದಲ್ಲಿ ಗುರುವಾರ ಬೇಟೆಯಾಡುತ್ತಿದ್ದ ಸಂದರ್ಭ ಪುಷ್ಪಗಿರಿ ವನ್ಯಧಾಮದ ಆರ್ ಎಫ್ಒ ಶ್ರೀನಿವಾಸನಾಯಕ್ ಸೋಮವಾರಪೇಟೆ ಆರ್ ಎಫ್ಒ ಲಕ್ಷ್ಮೀಕಾಂತ್, ಡಿಆರ್ ಎಫ್ಒ ದುಶ್ಯಂತ್ ನೇತೃತ್ವದಲ್ಲಿ ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಲಾಗಿದೆ. ಅಕ್ರಮಬೇಟೆ ಹಾಗು ಶಸ್ತ್ರಾಸ್ತ್ರ ಕಾಯಿದೆಯಡಿ ಮೊಕದ್ದಮೆ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು