ಶಿವಮೊಗ್ಗ: ಪ್ರಪಂಚದಲ್ಲಿ ಜನಾನುರಾಗಿ ನಾಯಕರಲ್ಲಿ ಪ್ರಧಾನಿ ಮೋದಿ ಸಹ ಒಬ್ಬರು. ಪ್ರಪಂಚವೇ ಮೋದಿ ಅವರನ್ನ ಒಪ್ಪಿಕೊಳ್ಳುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ್ ಸುಲಭ್ ಶೌಚಾಲಯಕ್ಕೆ ಮೋದಿ ಹೆಸರಿಡಿ ಎಂದು ಹೇಳುತ್ತಾರೆ. ಹೀಗಾಗಿಯೇ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದು. ಈಡೀ ಕಾಂಗ್ರೆಸ್ ನಾಯಕರ ವಿರುದ್ಧ ಬಳಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಸ್ಪಷ್ಟನೆ ನೀಡಿದರು.
ನಗರದಲ್ಲಿ ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದ ಗೌರವಾನ್ವಿತ ಪ್ರಧಾನಿ ವಿರುದ್ಧ ಅಸಭ್ಯ ಪದ ಬಳಕೆ ಮಾಡಿದರೆ ನಮಗೆ ಸಿಟ್ಟು ಬರುವುದಿಲ್ಲವಾ? ಹೀಗಾಗಿಯೇ ಆ ಸಂದರ್ಭದಲ್ಲಿ ನಾನು ಮಾತನಾಡಿದ್ದು ನಿಜ. ತಕ್ಷಣವೇ ನನ್ನ ಮಾತು ನನಗೆ ಅರಿವಾಗಿ, ಆ ಪದವನ್ನು ಹಿಂಪಡೆದು, ಕ್ಷಮೆ ಕೇಳಿದ್ದೇನೆ ಎಂದರು.
ಅವಾಚ್ಯ ಪದ ಬಳಕೆ ಮಾಡಿದ್ದು ಬಿ ಕೆ ಹರಿ ಪ್ರಸಾದ್ ವಿರುದ್ದ ಮಾತ್ರ ಎಂದ ಈಶ್ವರಪ್ಪ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.