News Karnataka Kannada
Monday, May 06 2024
ಕರ್ನಾಟಕ

ಆಮಿಷ ಆರೋಪ: ಸಚಿವ ಅಶ್ವತ್ಥನಾರಾಯಣ ಸೇರಿ ನಾಲ್ವರಿಗೆ ಹೈಕೋರ್ಟ್​ನಿಂದ ಬಿಗ್ ರಿಲೀಫ್

Rs 50 lakh If you don't, you will be killed by dubai gang: HC judge
Photo Credit :

ಪಕ್ಷಾಂತರ ನಾಯಕರಿಗೆ ಆಮಿಷ ಆರೋಪ ಪ್ರಕರಣದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೇರಿದಂತೆ ನಾಲ್ವರು ಬಿಜೆಪಿ ಮುಖಂಡರ ವಿರುದ್ಧ ಜಾರಿಯಾಗಿದ್ದ ಸಮನ್ಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಇಂದು ಅರ್ಜಿಯ ವಿಚಾರಣ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ವಿಶೇಷ ಕೋರ್ಟ್ ನಿಂದ ಸಚಿವ ಅಶ್ವತ್ಥನಾರಾಯಣ ಹಾಗೂ ಬಿಜೆಪಿ ಮುಖಂಡರಾದಂತ ಶ್ರೀನಿವಾಸ ಗೌಡ, ಎಸ್ ಆರ್ ವಿಶ್ವನಾಥ್, ಸಿಪಿ ಯೋಗೇಶ್ವರ್ ಅವರಿಗೆ ನೀಡಲಾಗಿದ್ದ ಸಮನ್ಸ್ ಅನ್ನು ರದ್ದುಗೊಳಿಸಿದೆ. ಈ ಮೂಲಕ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಜನಪ್ರತಿನಿಧಿಗಳ ವಿರುದ್ಧ ದೂರು ದಾಖಲಿಸುವ ಮುನ್ನ ದೂರುದಾರರು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕಿತ್ತು. ಆದರೆ ಪಿಸಿಆರ್ ದಾಖಲಿಸುವ ಮುನ್ನ ದೂರುದಾರರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ ವಿಚಾರಣಾ ನ್ಯಾಯಾಲಯ ಹೊರಡಿಸಿರುವ ಸಮನ್ಸ್ ನಿಯಮಾನುಸಾರ ಇಲ್ಲವೆಂದು ಪೀಠ ಅಭಿಪ್ರಾಯಪಟ್ಟಿದೆ.

ಟಿ.ಜೆ.ಆಬ್ರಾಹಂ ಎಂಬುವರು ಪಕ್ಷಾಂತರ ನಾಯಕರಿಗೆ ಬಿಜೆಪಿ ನಾಯಕರು ಬಿಜೆಪಿ ಬೆಂಬಲಿಸುವಂತೆ ಆಮಿಷ ಒಡ್ಡಿದ್ದಾರೆ ಎಂಬುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು