ಧಾರವಾಡ: ಅದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಸರ್ಕಾರಿ ಆಸ್ಪತ್ರೆ ಇಲ್ಲದೇ ಜನ ಪರದಾಟ ನಡೆಸಿದ್ದರು. ಆದರೆ, ಇನ್ನು ಆಸ್ಪತ್ರೆಯಿಲ್ಲದ ಕೊರಗು ದೂರವಾಗಲಿದೆ. ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ.
ಧಾರವಾಡದ ಹೊಸ ಗ್ರಾಮ ತೇಗೂರ. ಈ ಗ್ರಾಮ ಮತ್ತು ಅಕ್ಕಪಕ್ಕದ 12 ಹಳ್ಳಿಗಳಲ್ಲಿ ಯಾವುದೇ ಆಸ್ಪತ್ರೆಗಳಿಲ್ಲ. ಹೀಗಾಗಿ, ಇಲ್ಲಿನ ಜನರಿಗೆ ಏನಾದರೂ ಆದ್ರೆ ಧಾರವಾಡ ಪಟ್ಟಣ ಅಥವಾ ಬೆಳಗಾವಿಯ ಕಿತ್ತೂರಿಗೇ ಹೋಗಬೇಕಾದ ಪರಿಸ್ಥಿತಿ ಇದೆ.
ಈ ಬಗ್ಗೆ ಗ್ರಾಮದ ರುದ್ರಪ್ಪ ಗಾಣಿಗೇರ ಎಂಬ ಯುವಕ ಪ್ರಧಾನಿ ಮೋದಿ ಕಚೇರಿಗೆ ಮೇಲ್ ಮಾಡಿ ಸಮಸ್ಯೆ ಗಮನಕ್ಕೆ ತಂದಿದ್ದರು. ಮೇಲ್ ಸಿಕ್ಕ ತಕ್ಷಣ ಪ್ರಧಾನಿ ಮೋದಿ ಕಚೇರಿಯಿಂದ ಪ್ರತಿಕ್ರಿಯೆ ಬಂದಿದ್ದು, ಧಾರವಾಡ ಆರೋಗ್ಯ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಹೊಸ ತೇಗೂರ ಗ್ರಾಮ ಪಂಚಾಯ್ತಿ ಕೂಡಾ ಆಸ್ಪತ್ರೆಗಾಗಿ ಜಮೀನು ನೀಡಲು ಮುಂದಾಗಿದ್ದು, ಗ್ರಾಮದ ಹೊರವಲಯದ ಗೋಮಾಳ ಜಮೀನನ್ನು ನೀಡಲು ಠರಾವ್ ಪಾಸ್ ಮಾಡಿದೆ. ಹಲವು ವರ್ಷಗಳಿಂದ ಆಸ್ಪತ್ರೆಯಿಲ್ಲದೆ ಪರದಾಡುತ್ತಿದ್ದ ಈ ಗ್ರಾಮದ ಜನರಿಗೆ ಹೊಸದೊಂದು ಆಸೆ ಚಿಗುರಿದೆ.
ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್ಗಳಿಂದ…
ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ. ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…
ಶನಿವಾರ ತಡರಾತ್ರಿ ನಡೆದ ಐಪಿಎಲ್ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್…
ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…