ಬೆಂಗಳೂರು: ಇಂದಿರಾ ಕ್ಯಾಂಟೀನ್ ನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಲಾಗುವುದು.ಆದರೆ ಮುಚ್ಚುವ ನಿರ್ಧಾರವನ್ನು ಕೈಗೊಳ್ಳುವುದಿಲ್ಲ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕಾಂಗ್ರೆಸ್ ಮುಖಂಡರು ಈಚೆಗೆ ಇಂದಿರಾ ಕ್ಯಾಂಟೀನ್ ಮುಚ್ಚುವ ಪ್ರಯತ್ನ ನಡೆಸಿದರೆ ಹೋರಾಟ ನಡೆಸುವುದಾಗಿ ಹೇಳಿಕೆ ನೀಡಿದ ಬೆನ್ನಲ್ಲೆ ಸಿಎಂ ಪ್ರತಿಕ್ರಿಯಿಸಿದರು.
ಕ್ಯಾಂಟೀನ್ ವಿರುದ್ಧ ಸಾಕಷ್ಟು ಆರೋಪಗಳು ಕೇಳಿ ಬಂದ ಹಿನ್ನೆಲೆ ತನಿಖೆ ನಡೆಸಲಾಗುವುದು ಎಂದರು.