ಚಿಕ್ಕಮಗಳೂರು: ಕೇಂದ್ರ ಸರ್ಕಾರ ‘ರಾಜೀವ ಗಾಂಧಿ ಖೇಲ್ ರತ್ನ ಪ್ರಶಸ್ತಿ‘ಯ ಹೆಸರನ್ನು ‘ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ‘ ಎಂದು ಬಲಾಯಿಸಿರುವ ಬೆನ್ನಲ್ಲೇ ‘ಇಂದಿರಾ ಕ್ಯಾಂಟೀನ್’ ಹೆಸರು ಬದಲಾವಣೆ ಮಾಡಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಆಗ್ರಹಿಸಿದ್ದಾರೆ.
‘ರಾಜ್ಯದಾದ್ಯಂತ ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ, ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಘೋಷಣೆ ಮಾಡಬೇಕು’ ಎಂದು ಟ್ವೀಟ್ ಮೂಲಕ ಸಿ.ಟಿ.ರವಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ವಿನಂತಿಸಿದ್ದಾರೆ.
‘ಕ್ಯಾಂಟೀನ್ನಲ್ಲಿ ಕನ್ನಡಿಗರು ಊಟ ಮಾಡುವಾಗ ಏಕೆ ಇಂದಿರಾ ಗಾಂಧಿ ಅವರ ಹೆಸರಿನ ಮೂಲಕ ತುರ್ತು ಪರಿಸ್ಥಿತಿಯ ಕರಾಳ ದಿನಗಳನ್ನು ನೆನಪಿಸಿಕೊಳ್ಳಬೇಕು‘? ಎಂದು ಪ್ರಶ್ನಿಸಿರುವ ಅವರು ‘ಮುಖ್ಯಮಂತ್ರಿಯವರು ಆದಷ್ಟು ಬೇಗ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು‘ ಎಂದು ಆಗ್ರಹಿಸಿದ್ದಾರೆ.