ಬೆಂಗಳೂರು, ; ರಾಜ್ಯ ವಿಧಾನ ಮಂಡಲವನ್ನು ಕಾಗದ ರಹಿತಗೊಳಿಸುವ ಇ-ವಿಧಾನ ಯೋಜನೆ ಜಾರಿಗೆ ತರುವಲ್ಲಿ ಸರ್ಕಾರ ಬಹುತೇಕ ವಿಫಲವಾಗಿದೆ. ಇತ್ತೀಚೆಗೆ ಇ-ವಿಧಾನ ಕಾರ್ಯರೂಪಕ್ಕೆ ಬರದಿರುವ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗ್ಡೆ ಕಾಗೇರಿ ಬೇಸರ ವ್ಯಕ್ತಪಡಿಸಿದ್ದರು. 2014ರಲ್ಲಿ ರಾಜ್ಯದ ವಿಧಾನಮಂಡಲವನ್ನು ಕಾಗದ ರಹಿತವಾಗಿ ಮಾಡುವ ನಿಟ್ಟಿನಲ್ಲಿ ಕಾರ್ಯ ಆರಂಭವಾಗಿತ್ತು.
ಆ ವೇಳೆ ಹಿಮಾಚಲ ಪ್ರದೇಶ ವಿಧಾನಸಭೆ ಯನ್ನು ಡಿಜಿಟಲೀಕರಣ ಮಾಡಲಾಗಿತ್ತು. ಇದೇ ಮಾದರಿ ಯಲ್ಲಿ ರಾಜ್ಯ ವಿಧಾನಸಭೆ, ವಿಧಾನರಿಷತ್ನಲ್ಲಿ ಕಾಗದ ರಹಿತ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾಪ ಬಂದಿತ್ತು. ಈ ಸಂಬಂಧ ವಿಧಾನಸಭೆ ಸಚಿವಾಲಯದ ಉನ್ನತಾಧಿಕಾರಿಗಳು ಹಾಗೂ ಐಟಿ ತಜ್ಞರು 2015ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿ ಅಧ್ಯಯನ ಕೈಗೊಂಡು ಬಂದಿದ್ದರು.ಬೆಳಗಾವಿ ಸುವರ್ಣಸೌಧ ಕಟ್ಟಡ ಸೇರಿ ಉಭಯ ಸದನಗಳನ್ನ ಇ-ವಿಧಾನ ಮಂಡಲವಾಗಿಸಲು ಸುಮಾರು 69 ಕೋಟಿ ರೂ. ವೆಚ್ಚದ ಅಂದಾಜು ಮಾಡಲಾಗಿತ್ತು. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವಾಲಯ ಒನ್ ನೇಷನ್ ಒನ್ ಅಪ್ಲಿಕೇಷನ್ ಹೆಸರಿನಡಿ ನ್ಯಾಷನಲ್ ಇ-ವಿಧಾನ್ ಅಪ್ಲಿಕೇಷನ್ ಸಿದ್ಧಪಡಿಸಿದೆ. ಇದರ ವೆಬ್ಸೈಟ್ಗೆ ಕರ್ನಾಟಕವೂ ಸೇರ್ಪಡೆಗೊಂಡಿದೆ.
ರಾಷ್ಟ್ರೀಯ ಇ-ವಿಧಾನ್ ಅಪ್ಲಿಕೇಶನ್ (ನೆವ) ಇದರ ಅನುಷ್ಠಾನದ ಜವಾಬ್ದಾರಿ ಹೊಂದಿತ್ತು.ಕೇಂದ್ರ ಸರ್ಕಾರವೇ ಶೇ.60ರಷ್ಟು ವೆಚ್ಚ ಭರಿಸುವ ಹೊಣೆ ಹೊತ್ತಿತ್ತು. ಈ ಸಂಬಂಧ 2018ರಲ್ಲಿ ರಾಜ್ಯದ ಸಿಬ್ಬಂದಿಗೆ ತರಬೇತಿಯನ್ನು ನೀಡಲಾಗಿತ್ತು. ಆದರೆ ಇಷ್ಟು ವರ್ಷ ಕಳೆದರೂ ಶೀಘ್ರ ಯೋಜನೆ ಜಾರಿಗೆ ಬರುವ ಯಾವುದೇ ಲಕ್ಷಣ ಕಾಣುತ್ತಿಲ್ಲ.
ಇ ವಿಧಾನ ಯೋಜನೆ ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಫಲ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.